ಕನ್ನಡಪ್ರಭ ವಾರ್ತೆ ಬಾಗೂರು
ಹೋಬಳಿಯ ನವಿಲೆ ಹೊಸೂರು ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀದೇವಿ ಮಹಿಳಾ ಸ್ವಸಹಾಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 30ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದ್ದು ತನ್ನ ಗಂಡ ದುಡಿದು ತರುವ ಹಣವನ್ನು ಇತಿಮಿತಿಯಾಗಿ ಬಳಸಿ ಉಳಿತಾಯಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಾರೆ. ಅವರ ಈ ಮನೋಭಾವದಿಂದ ದೇಶ ಇಂದು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸಾಲಿನಲ್ಲಿ ಭಾರತ ದೇಶವು ಕೂಡ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.
ಗ್ರಾಮದ ಶ್ರೀ ಲಕ್ಷ್ಮಿ ದೇವಿ ಸಂಘವು ಕಳೆದ 30 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದು, ಕಳೆದ 30 ವರ್ಷಗಳಿಂದ ಇಲ್ಲಿಯವರೆಗೆ ಸುಮಾರು 1 ಕೋಟಿ 28 ಲಕ್ಷ ವಹಿವಾಟನ್ನು ನಡೆಸಿದೆ. ಸಂಘದಲ್ಲಿರುವ ಅನೇಕರು ಸಂಘದಲ್ಲಿ ಸಿಗುವ ಸಾಲವನ್ನು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಕುಟುಂಬ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಸಂಘ ಇದೇ ರೀತಿಯಲ್ಲಿ ಅಭಿವೃದ್ಧಿ ಹೊಂದಲಿ ಎಂದರು. ನವಿಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಈಗಾಗಲೇ ಕೃಷಿ ಪತ್ತಿನ ವ್ಯಾಪ್ತಿಯ ಸ್ವಸಹಾಯ ಸಂಘಗಳಿಗೆ ಸುಮಾರು 80 ಲಕ್ಷ ಸಾಲ ನೀಡಲಾಗಿದೆ ಮುಂಬರುವ ದಿನಗಳಲ್ಲೂ ಉತ್ತಮವಾಗಿ ನಿರ್ವಹಣೆ ಮಾಡುತ್ತಿರುವ ಸಂಘಗಳಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸುವಂತೆ ತಿಳಿಸಲಾಗಿದೆ ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದರೆ ಬಡ್ಡಿ ಕೂಡ ಕಡಿಮೆಯಾಗಲಿದೆ ಎಂದರು.
ನವಿಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆಗಳು ರಸ್ತೆ ಒಳಚರಂಡಿ ನಿರ್ಮಾಣ ಜೊತೆಗೆ ದೇವಾಲಯಗಳ ಜೀರ್ಣೋದ್ಧಾರಕ್ಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಗ್ರಾಮದ ಅಂಬೇಡ್ಕರ್ ಸಮುದಾಯ ಭವನ ನವೀಕರಣಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಶ್ರೀ ಲಕ್ಷ್ಮಿ ದೇವಿ ಸ್ವಸಹಾಯ ಸಂಘದ ಹಿರಿಯ ಸದಸ್ಯರುಗಳನ್ನು ಶಾಸಕ ಬಾಲಕೃಷ್ಣ ಅವರು ಸನ್ಮಾನಿಸಿದರು.