ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಶನಿವಾರ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಮುಳುಗಡೆಯಾಗುವ ಭೂಮಿಗೆ ಪರಿಹಾರದ ಮೊತ್ತ ಹೆಚ್ಚಿಸಿರುವುದು ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಐತಿಹಾಸಿಕ ನಿರ್ಧಾರವಾಗಿದೆ. ಈಗ ಪರಿಹಾರ ಮೊತ್ತ ವಿತರಣೆಯನ್ನೂ ಆರಂಭಿಸಲಾಗಿದೆ ಎಂದರು.
ಟಿಕೆಟ್ ಗೆ ಸಂಬಂಸಿದಂತೆ ನಮ್ಮ ಪಕ್ಷದಲ್ಲಿ ಯಾವುದೇ ಕಗ್ಗಂಟು ಇಲ್ಲ. ಮೇಟಿ ಅವರ ಕುಟುಂಬದ ಸದಸ್ಯರೆಲ್ಲ ಒಗ್ಗಟ್ಟಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಳಂಬದಿಂದಾಗಿ ಬಾಗಲಕೋಟೆ ಕ್ಷೇತ್ರದ್ದಕ್ಕೂ ವಿಳಂಬವಾಗಿದೆ. ಯಾವುದೇ ಕ್ಷಣದಲ್ಲಿ ಹೆಸರು ಘೋಷಣೆಯಾಗಲಿದೆ. ಈ ಕುರಿತು ಪಕ್ಷದ ಮುಖಂಡರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದರು.ಚುನಾವಣೆಯಲ್ಲಿ ಅವರು (ಬಿಜೆಪಿ) ಮುಂದಿದ್ದಾರೆ. ನಾವು (ಕಾಂಗ್ರೆಸ್) ಹಿಂದಿದ್ದೇವೆ ಎಂಬುದಿಲ್ಲ. ಅವರ ಅಭ್ಯರ್ಥಿ ಘೋಷಣೆಯಾಗಿರುವುದರಿಂದ ಪ್ರಚಾರ ಮಾಡುತ್ತಿದ್ದಾರೆ. ನಾವೂ ಇಂದು ಸಭೆ ಕರೆದಿದ್ದೇವೆ. ಪ್ರಚಾರವನ್ನೂ ಆರಂಭಿಸುತ್ತೇವೆ ಎಂದರು.
ಗ್ಯಾರಂಟಿ ಕೊಟ್ಟಿದ್ದು ತಪ್ಪು ಎಂದು ಅವರು ಘಂಟಾಘೋಷವಾಗಿ ಹೇಳಲಿ. ಒಳಗೊಳಗೆ ಹೇಳುವುದಲ್ಲ. ಬಡವರ ಹೊಟ್ಟೆಗೆ ಅನ್ನ, ಬೆಳಕು ಕೊಟ್ಟಿದ್ದು ತಪ್ಪು ಎಂದು ಹೇಳಿ ಜನತೆ ಮುಂದೆ ಬಿಜೆಪಿಯವರು ಹೋಗಲಿ. ಆಗ ಜನತೆ ಏನು ಹೇಳುತ್ತಾರೆ ಎಂದು ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.
ಸಿದ್ದರಾಮಯ್ಯ ಸುಳ್ಳು ಹೇಳುತ್ತಾರೆ ಎಂದು ಚಿತ್ರುದುರ್ಗದ ಸಂಸದರು ಟೀಕಿಸಿದ್ದಾರೆ. 2013ರ ಪಾದಯಾತ್ರೆ ಬಗ್ಗೆ ಹೇಳುತ್ತಾರೆ. ಆನಂತರ ಇವರು ಅಧಿಕಾರಕ್ಕೆ ಬಂದಿದ್ದರಲ್ಲ ಏನು ಮಾಡಿದರು. ನೀರಾವರಿ ಸಚಿವರಾಗಿದ್ದಾಗ ಯುಕೆಪಿ ಯೋಜನೆ ನೆನಪಾಗಲಿಲ್ಲವೇ? ಮುಖ್ಯಮಂತ್ರಿ ಬಗ್ಗೆ ಮಾತನಾಡಲು ಇವರಿಗೇನು ನೈತಿಕತೆ ಇದೆ ಎಂದು ಪ್ರಶ್ನಿಸಿದರು.ಕಾಂಗ್ರೆಸ್ ಅಭ್ಯರ್ಥಿ ಮಾ.23ರಂದು ಮಧ್ಯಾಹ್ನ 12.30 ರಿಂದ 2.30ರೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಸಂಪುಟದ ಸಚಿವರು ಭಾಗವಹಿಸಲಿದ್ದಾರೆ. ಪಕ್ಷದ ಗೆಲುವಿಗೆ ಯಾವುದೇ ತೊಂದರೆ ಇಲ್ಲ. ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ ಎಂದರು.
ಚುನಾವಣಾ ಸಮಿತಿ ಉಸ್ತುವಾರಿ ವಸಂತಕುಮಾರ, ಶಾಸಕ ಜೆ.ಟಿ. ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ, ಎಸ್.ಜಿ. ನಂಜಯ್ಯನಮಠ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ ಮತ್ತಿತರರು ಇದ್ದರು.ಅಸಮಧಾನ, ಗೊಂದಲ :
ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಇಲ್ಲಿ ಗ್ರಾಮೀಣ ಮತ್ತು ನಗರ ಬೇರೆ ಬೇರೆ ಎಂದು ತಾರತಮ್ಯ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಈ ಬಗ್ಗೆ ಕೂಗಾಟ ಮಾಡಲು ಆರಂಭಿಸಿದ್ದರಿಂದ ಅವರನ್ನು ಹೊರಗೆ ಕಳುಹಿಸಲಾಯಿತು. ಪಕ್ಷದಲ್ಲಿ ಮಹಿಳೆಯರಿಗೆ ಸ್ಥಾನಮಾನಕ್ಕೆ ಸಂಬಂಸಿದಂತೆ ಮಹಿಳಾ ಕಾರ್ಯಕರ್ತರು ಅಸಮಧಾನ ಹೊರಹಾಕಿದರು. ನಮಗೆ ಸೂಕ್ತ ಸ್ಥಾನಮಾನ ನೀಡುವುದಿಲ್ಲ. ಮತ್ತೆ ಸಭೆಗೆ ಏಕೆ ಕರೆಯುತ್ತೀರಿ? ನಾವು ಸರ್ಕಾರದ ಗ್ಯಾರಂಟಿ ಬಗ್ಗೆ ಹೇಳಿ ಜನರನ್ನು ಕರೆದುಕೊಂಡು ಬರುತ್ತೇವೆ. ಗ್ಯಾರಂಟಿ ಬಗ್ಗೆ ಯಾಕೆ ಮಾತನಾಡುತ್ತೀರಿ ಎಂದು ಕಾರ್ಯಕರ್ತರೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಮಾತಿಗೆ ಮಾತು ಬೆಳೆಯಲಾರಂಭಿಸಿತು. ಸಚಿವರು ಮಧ್ಯೆ ಪ್ರವೇಶಿಸಿ ಮಾಧ್ಯಮದವರು ಇದ್ದಾರೆ ಎಂದರು. ಪಕ್ಷದ ಮುಖಂಡರು ಸಮಾಧಾನ ಪಡಿಸಿ, ಪರಿಸ್ಥಿತಿ ತಿಳಿಗೊಳಿಸಿದರು.ಕಾಂಗ್ರೆಸ್ಲ್ಲಿರುವೆ: ಹೊಕ್ರಾಣಿ
ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಅಲ್ಲಿಯೇ ಇರುತ್ತೇನೆ ಎಂದು ಮುಖಂಡ ಸಂತೋಷ ಹೊಕ್ರಾಣಿ ಹೇಳಿದರು.ಕೆಲವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆಹ್ವಾನ ನೀಡಿದ್ದರು. ಆದರೆ, ಎಲ್ಲಿಯೂ ಹೋಗುವುದಿಲ್ಲ. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು.
ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿ, ಪಕ್ಷವನ್ನು ಹೇಗೆ ಗೆಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಈಗಾಗಲೇ ಹೊಕ್ರಾಣಿ ಅವರು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.