ಕನ್ನಡಪ್ರಭ ವಾರ್ತೆ ಮಡಿಕೇರಿ
ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಚಂಗ್ರಾಂದಿ ಪತ್ತಲೋದಿ ಕಾರ್ಯಕ್ರಮದ 9ನೇ ದಿನದ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೇವರಿಗೆ ಭಂಡಾರ ಹಾಕುವಂತೆ ಕೊಡವಾಮೆಗೆ ನಮ್ಮ ಕೊಡುಗೆ ನೀಡಬೇಕು ಎಂದರು.ಮತ್ತೋರ್ವ ಮುಖ್ಯ ಅತಿಥಿ ಯುಕೊ ಸಂಘಟನೆಯ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರು ಮಾತನಾಡಿ ಕೊಡವ ಸಮಾಜಗಳು ಮದುವೆ ಮಾಡುವ ಕಲ್ಯಾಣ ಮಂಟಪ ಎನ್ನುವ ಅಪವಾದವನ್ನು ಟಿ. ಶೆಟ್ಟಿಗೇರಿ ಕೊಡವ ಸಮಾಜ ಪತ್ತಾಲೋದಿ ಕಾರ್ಯಕ್ರಮ ಮಾಡುವ ಮೂಲಕ ದೂರಸರಿಸಿದೆ. ಯಾವುದೇ ಸರ್ಕಾರಗಳು ಕೊಡವರಿಗೆ ಯಾವುದೇ ಕೊಡುಗೆ ನೀಡಿದರೂ ಕೊಡವರ ಆಂತರಿಕ ಶಕ್ತಿಯಾದ ನೆಲ್ಲಕ್ಕಿ ನಡುಬಾಡೆ, ಮಂದ್, ಐನ್ ಮನೆ ಕೈಮಡಗಳನ್ನು ರಕ್ಷಿಸಿ ಅದರ ಆಚರಣೆಯನ್ನು ಸರಿಯಾಗಿ ಮಾಡಿದಾಗ ಜನಾಂಗಕ್ಕೆ ಒಳಿತಾಗುತ್ತದೆ ಎಂದು ಹೇಳಿದರು.
ಶ್ರೀಮಂಗಲ ಕೊಡವ ಸಮಾಜ ಪೊಮ್ಮಕ್ಕಡ ಕೂಟದಿಂದ ವಿವಿಧ ಕೊಡವ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.
ವೇದಿಕೆಯಲ್ಲಿ ನೆಲ್ಲೀರ ನೀನಾ ಪೂಣಚ್ಚ, ಕಳ್ಳಿಚಂಡ ದೀನಾ ಉತ್ತಪ್ಪ ವೇದಿಕೆಯಲ್ಲಿ ಹಾಜರಿದ್ದರು.ಚೆಟ್ಟಂಡ ಲತಾ ಚರ್ಮಣ ಪ್ರಾರ್ಥಿಸಿದರು. ಬಾದುಮಂಡ ವಿಷ್ಣು ಕಾರ್ಯಪ್ಪ ಸ್ವಾಗತಿಸಿ ಉಪಾಧ್ಯಕ್ಷ ಮಚ್ಚಮಾಡ ಸುಮಂತ್ ವಂದಿಸಿದರು. ನಿರ್ದೇಶಕರಾದ ಚಂಗುಲಂಡ ಅಶ್ವಿನಿ ಸತೀಶ್, ಮುಕ್ಕಾಟಿರ ಸಂದೀಪ್, ಕರ್ನಂಡ ರೂಪ ದೇವಯ್ಯ, ಚಂಗುಲಂಡ ಸತೀಶ್, ಕೋಟ್ರಮಾಡ ಸುಮಂತ್ ಮಾದಪ್ಪ ಕಾರ್ಯಕ್ರಮ ನಿರ್ವಹಿಸಿದರು.