ಕನ್ನಡಪ್ರಭ ವಾರ್ತೆ ಕಾರ್ಕಳ
ಸರ್ವಧರ್ಮ ಸೌಹಾರ್ದತೆ
ಈ ವರ್ಷದ ಮಹೋತ್ಸವದ ಕೇಂದ್ರ ವಿಷಯ "ಭರವಸೆ ನಮ್ಮನ್ನು ನಿರಾಸೆ ಮಾಡುವುದಿಲ್ಲ " (ರೋಮಾ 5:5) ಆಗಿದ್ದು, ಸರ್ವಧರ್ಮ ಸೌಹಾರ್ದತೆಯನ್ನು ಹೆಚ್ಚಿಸುತ್ತದೆ. ಭಿನ್ನಹ ಸಲ್ಲಿಸಲು ಮತ್ತು ಸಂತ ಲಾರೆನ್ಸ್ ಅವರ ಪವಾಡಗಳನ್ನು ಸ್ಮರಿಸಲು ವಿವಿಧ ಧರ್ಮದ ಜನರು ಭಾಗವಹಿಸಿದ್ದರು.ಪ್ರಮುಖ ಬಲಿಪೂಜೆಗಳು
ಗಣ್ಯರ ಭೇಟಿ
ಮಹೋತ್ಸವದಲ್ಲಿ ಹಲವು ರಾಜಕೀಯ ಮತ್ತು ಸಾರ್ವಜನಿಕ ಗಣ್ಯರು ಪಾಲ್ಗೊಂಡರು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ರಮಾನಾಥ್ ರಾಯ್ ಮತ್ತು ವಿಧಾನಪರಿಷತ್ ಸದಸ್ಯ ಐವನ್ ಪಾಲ್ಗೊಂಡಿದ್ದರು.ಪಾದಯಾತ್ರೆ ಮತ್ತು ಭಕ್ತರ ಚಟುವಟಿಕೆಗಳು
ಶಿರ್ವ, ಪಾಂಬೂರು, ಮತ್ತು ಮೂಡುಬೆಳ್ಳೆಯಿಂದ ಬಹಳಷ್ಟು ಜನ ಪಾದಯಾತ್ರೆ ಗೈದು ಅತ್ತೂರಿನ ಪುಣ್ಯಕ್ಷೇತ್ರವನ್ನು ತಲುಪಿದರು. ಪುಷ್ಕರಣಿಗೆ ಭೇಟಿ, ಮೊಂಬತ್ತಿ ಬೆಳಗುವಿಕೆ, ಪೂಜಾ ಭಿನ್ನಹ ಸಲ್ಲಿಕೆ, ಬಲಿಪೂಜೆ, ಪಾಪ ನಿವೇದನೆ ಸಂಸ್ಕಾರ, ಮತ್ತು ಪುಷ್ಪತೀರ್ಥದಲ್ಲಿ ಭಾಗವಹಿಸಿದರು.ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ಮಹೋತ್ಸವವು, ಭಕ್ತರ ಆತ್ಮಸಂತೃಪ್ತಿಯೊಂದಿಗೆ ಧಾರ್ಮಿಕ ನಂಬಿಕೆ, ಸೌಹಾರ್ದತೆ ಮತ್ತು ಸಮುದಾಯ ಭಾವೈಕ್ಯತೆಯನ್ನು ಮತ್ತಷ್ಟು ಘನಗೊಳಿಸಿತು.