ಶಾಸಕರು ಸೇರಿದಂತೆ ಭಕ್ತರಿಂದ ಹನುಮಾಲೆ ವಿಸರ್ಜನೆ

KannadaprabhaNewsNetwork |  
Published : Dec 04, 2025, 02:30 AM IST
3ುಲು101,,, | Kannada Prabha

ಸಾರಾಂಶ

ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಆಂಜನೇಯಸ್ವಾಮಿ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ

ಗಂಗಾವತಿ:ಹನುಮದ್ ವ್ರತ ಆಚರಣೆ ಅಂಗವಾಗಿ ಅಂಜನಾದ್ರಿಯಲ್ಲಿ ಕಳೆದ ಎರಡು ದಿನಗಳಿಂದ ನಡೆದ ಹನುಮಾಲಾ ವಿಸರ್ಜನೆಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಸಹಸ್ರಾರು ಮಾಲಾಧಾರಿಗಳು ಮಾಲೆ ವಿಸರ್ಜನೆ ಮಾಡಿದರು.

ಕಳೆದ ಐದು ದಿನಗಳಿಂದ ಹನುಮಮಾಲೆ ಧರಿಸಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಅಂಜನಾದ್ರಿ ಬೆಟ್ಟ ಏರಿ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ ಮಾಡಿದರು.

ಈ ಸಂದರ್ಭದಲ್ಲಿ ಅರ್ಚಕರು ಶಾಸಕರಿಗೆ ಶಾಲು ಹಾಕಿ ಗೌರವಿಸಿದರು. ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಂಜನಾದ್ರಿ ಬೆಟ್ಟದ ಕೆಳಗೆ ಇರುವ ಆಂಜನೇಯಸ್ವಾಮಿ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾಲೆ ವಿಸರ್ಜನೆ ಮಾಡಿದರು.

ಅಲ್ಲದೇ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭಕ್ತರು ಮಾಲೆ ವಿಸರ್ಜನೆ ಮಾಡಿ ವ್ರತಾಚರಣೆಯ ಸೇವೆ ಪೂರ್ಣಗೊಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಸುದ್ದಿ
ಜನಪ್ರತಿನಿಧಿಗಳಿಗೆ ಗೌರ್‍ನರ್‌ ಅಪಮಾನ : ಸಿದ್ದರಾಮಯ್ಯಆಕ್ರೋಶ