ಹುತ್ತಕ್ಕೆ ಹಾಲೆರೆದು ನಾಗರ ಪಂಚಮಿ ಪೂಜೆ ಸಲ್ಲಿಸಿದ ಭಕ್ತರು

KannadaprabhaNewsNetwork |  
Published : Aug 18, 2026, 01:45 AM IST
17ಎಚ್ಎಸ್ಎನ್3 : ಹಾಸನ ನಗರದ ಮಹಾರಾಜ ಪಾರ್ಕ್‌ ನಲ್ಲಿರುವ ಹುತ್ತಕ್ಕೆ ಪೂಜೆ ಸಲ್ಲಿಸಿದ ಭಕ್ತರು. | Kannada Prabha

ಸಾರಾಂಶ

ಹುತ್ತಕ್ಕೆ ಹಾಲೆರೆದು, ಹೂವು, ಹಣ್ಣು ಹಾಗೂ ವಿವಿಧ ಬಗೆಯ ತಿನಿಸುಗಳನ್ನು ಅರ್ಪಿಸಿ ನಾಗದೇವತೆಯ ಆಶೀರ್ವಾದ ಪಡೆದುಕೊಳ್ಳಲು ಭಕ್ತರು ಪ್ರಾರ್ಥಿಸಿದರು. ನಾಗರ ಪಂಚಮಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹುತ್ತದ ಸುತ್ತಮುತ್ತ ಭಕ್ತರ ಸಂಚಾರ ಹೆಚ್ಚಾಗಿತ್ತು. ಕುಟುಂಬ ಸಮೇತರಾಗಿ ಆಗಮಿಸಿದ್ದ ಮಹಿಳೆಯರು ಸಂಪ್ರದಾಯಬದ್ಧವಾಗಿ ಪೂಜೆ ನೆರವೇರಿಸಿ, ನಾಗದೇವತೆಗೆ ಹಾಲು, ಹೂವು ಹಾಗೂ ನೈವೇದ್ಯ ಅರ್ಪಿಸಿದರು. ಕೆಲವರು ತಮ್ಮ ಕುಟುಂಬದ ಒಳಿತಿಗಾಗಿ, ಆರೋಗ್ಯ, ಐಶ್ವರ್ಯ ಹಾಗೂ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ನಾಗರ ಪಂಚಮಿ ಹಬ್ಬದ ಅಂಗವಾಗಿ ನಗರದ ಮಹಾರಾಜ ಪಾರ್ಕ್‌ ಆವರಣ ಹಾಗೂ ವಿವಿಧ ದೇವಸ್ಥಾನಗಳಲ್ಲಿರುವ ಹುತ್ತಕ್ಕೆ ಸೋಮವಾರ ಬೆಳಗ್ಗೆಯಿಂದಲೇ ನೂರಾರು ಭಕ್ತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರತಿವರ್ಷದಂತೆ ಈ ವರ್ಷವೂ ನಾಗರ ಪಂಚಮಿ ಹಿನ್ನೆಲೆಯಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳು ಸೇರಿದಂತೆ ವಿವಿಧ ವಯೋಮಾನದ ಭಕ್ತರು ಮಹಾರಾಜ ಪಾರ್ಕ್‌ನಲ್ಲಿರುವ ಹುತ್ತದ ಬಳಿ ಆಗಮಿಸಿ ನಾಗದೇವತೆಗೆ ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು. ಹುತ್ತಕ್ಕೆ ಹಾಲೆರೆದು, ಹೂವು, ಹಣ್ಣು ಹಾಗೂ ವಿವಿಧ ಬಗೆಯ ತಿನಿಸುಗಳನ್ನು ಅರ್ಪಿಸಿ ನಾಗದೇವತೆಯ ಆಶೀರ್ವಾದ ಪಡೆದುಕೊಳ್ಳಲು ಭಕ್ತರು ಪ್ರಾರ್ಥಿಸಿದರು. ನಾಗರ ಪಂಚಮಿ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಹುತ್ತದ ಸುತ್ತಮುತ್ತ ಭಕ್ತರ ಸಂಚಾರ ಹೆಚ್ಚಾಗಿತ್ತು. ಕುಟುಂಬ ಸಮೇತರಾಗಿ ಆಗಮಿಸಿದ್ದ ಮಹಿಳೆಯರು ಸಂಪ್ರದಾಯಬದ್ಧವಾಗಿ ಪೂಜೆ ನೆರವೇರಿಸಿ, ನಾಗದೇವತೆಗೆ ಹಾಲು, ಹೂವು ಹಾಗೂ ನೈವೇದ್ಯ ಅರ್ಪಿಸಿದರು. ಕೆಲವರು ತಮ್ಮ ಕುಟುಂಬದ ಒಳಿತಿಗಾಗಿ, ಆರೋಗ್ಯ, ಐಶ್ವರ್ಯ ಹಾಗೂ ಸುಖ-ಶಾಂತಿಗಾಗಿ ಪ್ರಾರ್ಥಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ಭಕ್ತರು ಭಕ್ತಿಗೀತೆಗಳನ್ನು ಹಾಡುತ್ತಾ, ನಾಗದೇವತೆಯನ್ನು ಆರಾಧಿಸಿ ತಮ್ಮ ಧಾರ್ಮಿಕ ನಂಬಿಕೆ ಹಾಗೂ ಸಂಪ್ರದಾಯವನ್ನು ಮುಂದುವರಿಸಿದರು. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗದೇವತೆಗೆ ಪೂಜೆ ಸಲ್ಲಿಸಿ ಕುಟುಂಬದ ಸದಸ್ಯರ ಒಳಿತಿಗಾಗಿ ಪ್ರಾರ್ಥಿಸಿದರು. ನಾಗರಪಂಚಮಿ ಹಬ್ಬವು ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ವಿಶೇಷ ಮಹತ್ವ ಹೊಂದಿದ್ದು, ನಾಗದೇವತೆಯನ್ನು ಆರಾಧಿಸುವ ಮೂಲಕ ಪ್ರಕೃತಿ, ಜೀವಜಂತುಗಳು ಹಾಗೂ ಪರಿಸರದೊಂದಿಗೆ ಮನುಷ್ಯನ ಅವಿನಾಭಾವ ಸಂಬಂಧವನ್ನು ಸ್ಮರಿಸುವ ದಿನವಾಗಿದೆ. ಹೀಗಾಗಿ ನಗರದ ವಿವಿಧೆಡೆ ನಾಗರಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮಹಾರಾಜ ಪಾರ್ಕ್‌ ಆವರಣದಲ್ಲಿರುವ ಹುತ್ತದ ಬಳಿ ಬೆಳಗ್ಗೆಯಿಂದಲೇ ಭಕ್ತರು ಸರದಿಯಲ್ಲಿ ನಿಂತು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಹಬ್ಬದ ಹಿನ್ನೆಲೆಯಲ್ಲಿ ಮಕ್ಕಳು ಸೇರಿದಂತೆ ಕುಟುಂಬದ ಸದಸ್ಯರು ಒಟ್ಟಾಗಿ ಆಗಮಿಸಿ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮಪ್ಪನಾಣೆ ತಮಿಳುನಾಡಿಗೆ ನೀರು ಬಿಟ್ಟಿಲ್ಲ: ಶಾಸಕ ರಮೇಶ ಬಂಡಿಸಿದ್ದೇಗೌಡ ಸಮರ್ಥನೆ
ವಿದ್ಯಾರ್ಥಿನಿಯರು ವಿದ್ಯಾಭ್ಯಾಸವನ್ನು ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆಯಿರಿ