ಸುಕ್ಷೇತ್ರಗಳ ಅಭಿವೃದ್ಧಿಗೆ ಭಕ್ತಾದಿಗಳು ಮುಂದಾಗಿ

KannadaprabhaNewsNetwork |  
Published : Nov 27, 2025, 02:00 AM IST
ಗುಬ್ಬಿ ತಾಲೂಕಿನ  ದೊಣೆ ಗಂಗಾ ಕ್ಷೇತ್ರದಲ್ಲಿ ಗಡಿಭಾಗವಾದ ಶ್ರೀ ಸಿದ್ದರಾಮೇಶ್ವರರ ತಪೋವನದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು  ಉದ್ಘಾಟಿಸಿದ  ಕಾರೆ ಕುರ್ಚಿ ಸಿದ್ದರಾಮೇಶ್ವರ ತಪೋವನ ಕ್ಷೇತ್ರದ ಅಧ್ಯಕ್ಷರಾದ ಮೃತ್ಯುಂಜಯ ಮಹಾಸ್ವಾಮೀಜಿ.  | Kannada Prabha

ಸಾರಾಂಶ

ಸುಕ್ಷೇತ್ರಗಳ ಅಭಿವೃದ್ಧಿಗೆ ಭಕ್ತಾದಿಗಳು ಮುಂದಾಗಬೇಕು ಎಂದು ಕಾರೆ ಕುರ್ಚಿ ಸಿದ್ಧರಾಮೇಶ್ವರ ತಪೋವನದ ಅಧ್ಯಕ್ಷ ಶ್ರೀ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ಸುಕ್ಷೇತ್ರಗಳ ಅಭಿವೃದ್ಧಿಗೆ ಭಕ್ತಾದಿಗಳು ಮುಂದಾಗಬೇಕು ಎಂದು ಕಾರೆ ಕುರ್ಚಿ ಸಿದ್ಧರಾಮೇಶ್ವರ ತಪೋವನದ ಅಧ್ಯಕ್ಷ ಶ್ರೀ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಗುಬ್ಬಿ ತಾಲೂಕಿನ ದೊಣೆ ಗಂಗಾ ಕ್ಷೇತ್ರದ ಗಡಿಭಾಗವಾದ ಶ್ರೀ ಸಿದ್ದರಾಮೇಶ್ವರರ ತಪೋವನದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಸಿದ್ದರಾಮೇಶ್ವರರು ಇಲ್ಲಿ ತಪಸ್ಸು ಮಾಡಿರುವಂತಹ ಪುಣ್ಯಭೂಮಿಯಾಗಿದೆ. ಅನಾದಿಕಾಲದಿಂದಲೂ ತನ್ನದೇ ಆದ ಶರಣರ ಪರಂಪರೆಯನ್ನು ನಡೆಸಿಕೊಂಡು ಬಂದಿದೆ. ಯಾತ್ರಿ ನಿವಾಸ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ದೇವಾಲಯದಲ್ಲಿ ನಡೆಯುತ್ತಿವೆ ಎಂದು ತಿಳಿಸಿದರು.

ಕರಡಿ ಗವಿ ಮಠದ ಶಿವಶಂಕರ ಶಿವಯೋಗಿ ಸ್ವಾಮೀಜಿಗಳು ಮಾತನಾಡಿ, ಶ್ರೀ ಸಿದ್ದರಾಮೇಶ್ವರರು ನಾಡಿನಾದ್ಯಂತ ಸಂಚಾರವನ್ನು ಮಾಡುವ ಮೂಲಕ ಸಾಮಾಜಿಕವಾಗಿ ಧಾರ್ಮಿಕವಾಗಿ ಸಾಕಷ್ಟು ಕೆಲಸವನ್ನು ಮಾಡಿದಂತಹ ಮಹಾಪುರುಷರಾಗಿದ್ದರು. ಇಲ್ಲಿಯೂ ಸಹ ಆಗಮಿಸಿ ಲೋಕ ಕಲ್ಯಾಣಕ್ಕಾಗಿ ತಪ್ಪಸ್ಸು ಮಾಡಿರುವ ಜಾಗವಿದು. ಖಂಡಿತ ಇದು ಮುಂದಿನ ದಿನದಲ್ಲಿ ದೊಡ್ಡ ಮಟ್ಟದಲ್ಲಿ ಧಾರ್ಮಿಕ ಕೇಂದ್ರವಾಗಿ ಬೆಳೆಯುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆರೆಗೋಡಿ ರಂಗಪುರದ ಗುರು ಪರದೇಶಿ ಕೇಂದ್ರ ಸ್ವಾಮೀಜಿ, ಬಳೆ ಕಟ್ಟೆಯ ಇಮ್ಮಡಿ ಕರಿ ಬಸವ ದೇಶೀಕೇಂದ್ರ ಸ್ವಾಮೀಜಿ, ಯಳನಾಡು ಸಂಸ್ಥಾನದ ಜ್ಞಾನ ಪ್ರಭು ಸಿದ್ದರಾಮೇಶ್ವರ ದೇಶಿಕೇಂದ್ರ ಸ್ವಾಮೀಜಿ, ಸೇರಿದಂತೆ ಟ್ರಸ್ಟ್ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಸಾವಿರಾರು ಭಕ್ತರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣಕ್ಕೆ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ
ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರ ಹಿತ ಕಾಪಾಡಿ