ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಭಕ್ತಿದೀಕ್ಷೆ: ನೂರಾರು ಭಕ್ತರಿಗೆ ಪೇಜಾವರ ಶ್ರೀಗಳಿಂದ ಕೃಷ್ಣ ಮಂತ್ರೋಪದೇಶ

KannadaprabhaNewsNetwork |  
Published : Jul 06, 2025, 11:48 PM IST
05ಪೇಜಾವರ | Kannada Prabha

ಸಾರಾಂಶ

ಜಾತಿ, ಪಂಥ, ವಯಸ್ಸು, ಲಿಂಗ ಭೇದವಿದಲ್ಲದೇ 8 ರಿಂದ 80 ವರ್ಷದ ವರೆಗಿನ ಹಿಂದು ಪುರುಷ, ಮಹಿಳೆಯರಿಗೆ ಶ್ರೀಗಳು ತಪ್ತಮುದ್ರಾಧಾರಣೆಗೈದು, ಜಪಸರವನ್ನಿತ್ತು ಕೃಷ್ಣಮಂತ್ರೋಪದೇಶ ನೀಡಿ ಪ್ರಸಾದ ಸಹಿತ ಅನುಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶನಿವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು 500ಕ್ಕೂ ಅಧಿಕ ಹಿಂದು ಶ್ರದ್ಧಾಳುಗಳಿಗೆ ಸಾಮೂಹಿಕ ಕೃಷ್ಣ ಮಂತ್ರೋಪದೇಶ ನೀಡಿ ಅನುಗ್ರಹಿಸಿದರು.

ಜಾತಿ, ಪಂಥ, ವಯಸ್ಸು, ಲಿಂಗ ಭೇದವಿದಲ್ಲದೇ 8 ರಿಂದ 80 ವರ್ಷದ ವರೆಗಿನ ಹಿಂದು ಪುರುಷ, ಮಹಿಳೆಯರಿಗೆ ಶ್ರೀಗಳು ತಪ್ತಮುದ್ರಾಧಾರಣೆಗೈದು, ಜಪಸರವನ್ನಿತ್ತು ಕೃಷ್ಣಮಂತ್ರೋಪದೇಶ ನೀಡಿ ಪ್ರಸಾದ ಸಹಿತ ಅನುಗ್ರಹಿಸಿದರು.ಸಮಸ್ತ ಹಿಂದು ಸಮಾಜದ ಸಂಘಟನೆ ಬಲಪಡಿಸುವುದು, ಎಲ್ಲರೂ ಸದಾಚಾರ ನಿಷ್ಠರಾಗಿ ನೆಮ್ಮದಿಯ ಜೀವನ ನಡೆಸುವ ಹಾಗೆ ಆಗಬೇಕು. ನಮ್ಮ ಆಚಾರ ವಿಚಾರಗಳನ್ನು ಜಾತಿ ಪಂಥಗಳ ಭೇದವಿಲ್ಲದೇ ಸಮಷ್ಟಿಯಾಗಿ ಪಾಲಿಸಿಕೊಂಡು ಬರುವಂತಾಗಬೇಕೆಂಬ ಸದುದ್ದೇಶದಿಂದ ಆಷಾಢ ಮಾಸದ ಪರ್ವಕಾಲದಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತವಿರುವ ಮಠದ ಎಲ್ಲ ಶಾಖೆಗಳಲ್ಲೂ ಇಂಥ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶ ಇದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ಡಾ. ಸತ್ಯನಾರಾಯಣ ಆಚಾರ್ಯ, ಸಂಶೋಧನ ಕೇಂದ್ರದ ನಿರ್ದೇಶಕ ಡಾ. ವೀರನಾರಾಯಣ ಪಾಂಡುರಂಗಿ, ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಶಶಾಂಕ ಭಟ್ ಹಾಗೂ ಪ್ರಾಧ್ಯಾಪಕರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌