ಕನ್ನಡಪ್ರಭ ವಾರ್ತೆ ಶಿವಮೊಗ್ಗ/ ಭದ್ರಾವತಿ/ ಹೊಳೆಹೊನ್ನೂರು/ ಸೊರಬ
ರಾಮನವಮಿ ಅಂಗವಾಗಿ ಬೆಳಗ್ಗೆಯೇ ಶ್ರೀ ಕೋಟೆ ಸೀತಾರಾಮಾಂಜನೇಯ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಶ್ರೀರಾಮ ಕೃಪೆಗೆ ಪಾತ್ರರಾದರು. ಇದೇ ವೇಳೆ ದುರ್ಗಿಗುಡಿಯ ಸೀತರಾಮ ದೇವಸ್ಥಾನದ ದೇವರ ರಥೋತ್ಸವ ಜರುಗಿತು. ಗಾಂಧಿಬಜಾರ್ನ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.
ನಗರದಲ್ಲಿ ಬಿರುಬಿಸಿಲು ಇರುವ ಕಾರಣ ವಿವಿಢೆ ಶ್ರೀರಾಮನವಮಿಗೆ ಪಾನಕ, ಮಜ್ಜಿಗೆ, ಕೊಸಂಬರಿಯನ್ನು ಪ್ರಸಾದದ ರೂಪದಲ್ಲಿ ಹಳಚಲಾಯಿತು. ಆಟೋ ಸ್ಟ್ಯಾಂಡ್, ಬಸ್ ಸ್ಟ್ಯಾಂಡ್ ಮುಂಭಾಗ ಸೇರಿದಂತೆ ಹಲವಡೆ ಯುವಕರು ಪಾನಕ, ಕೊಸಂಬರಿ ಹಂಚಿದರು. ಹೊಳೆಹೊನ್ನೂರು ಶ್ರೀರಾಮ ಮಂದಿರದಲ್ಲಿ ರಾಮನವಮಿಸಹಸ್ರಾರು ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ರಥೋತ್ಸವದ ನಂತರ ಬುಳ್ಳಾಪುರದ ಶ್ರೀರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಭಜನೆ ಕಾರ್ಯಕ್ರಮ ನಡೆಯಿತು. ಶ್ರೀ ರಾಮ ದೇವಾಲಯದ ಆಡಳಿತ ಮಂಡಳಿ ಪ್ರಮುಖರು ಉಪಸ್ಥಿತರಿದ್ದರು.ಚಿಕ್ಕಮಾಕೊಪ್ಪ ಗ್ರಾಮದಲ್ಲಿ ಶ್ರೀರಾಮನಿಗೆ ಪೂಜಾ ವಿಧಿ
ಸೊರಬ: ತಾಲೂಕಿನ ಚಿಕ್ಕಮಾಕೊಪ್ಪ ಗ್ರಾಮದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ರಾಮ ನವಮಿ ಅಂಗವಾಗಿ ಶ್ರೀ ದೇವರಿಗೆ ಬುಧವಾರ ವಿಶೇಷವಾಗಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು.ಬೆಳಗ್ಗೆಯಿಂದಲೇ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಾನಗಳೊಂದಿಗೆ ಗಣಪತಿ ಪೂಜೆ, ಪುಣ್ಯಾಹ ವಾಚನ, ನಾಂದಿ, ಕಲಶ ಸ್ಥಾಪನೆ, ಪವಮಾನ, ಪಂಚ ಸೂಕ್ತ ಹವನ, ಪೂರ್ಣಾಹುತಿ ಸೇರಿದಂತೆ ಮಹಮಂಗಳಾರತಿ ನೆರವೇರಿದವು.
ನಿರಂಜನ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನಡೆದವು, ವಿಶೇಷವಾಗಿ ದೇವಸ್ಥಾನಕ್ಕೆ ಪುಷ್ಪಗಳಿಂದ ಮತ್ತು ಕೇಸರಿ ಧ್ವಜಗಳಿಂದ ಹಾಗೂ ಮಾವಿನ ಎಲೆಗಳ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಸಹ ರಾಮನವಮಿ ಅಂಗವಾಗಿ ಶ್ರೀರಾಮೇಶ್ವರ ಸೇವಾ ಸಮಿತಿ ವತಿಯಿಂದ ಬಂದಂತಹ ಭಕ್ತರಿಗೆ ಅನ್ನದಾಸೋಹ ಪ್ರಸಾದ ಸೇವೆ ಜೊತೆಗೆ ಪಾನಕ, ಕೋಸಂಬರಿ, ವಿತರಿಸಲಾಯಿತು.ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಶ್ರೀ ರಾಮೇಶ್ವರ ದೇವರ ದರ್ಶನ ಪಡೆದರು. ಸಂಜೆ ವೇಳೆ ಗ್ರಾಮದಲ್ಲಿ ಶ್ರೀರಾಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಭ್ರಮದಿಂದ ಜರುಗಿತು, ಶ್ರೀ ರಾಮೇಶ್ವರ ಗೆಳೆಯರ ಬಳಗದವರು ರಾಮನವಮಿ ಅಂಗವಾಗಿ ಸುಮಾರು ೩೦ ಅಡಿ ಎತ್ತರದ ಶ್ರೀ ರಾಮನ ಭಾವಚಿತ್ರವನ್ನು ಅಳವಡಿಸಿದ್ದು ವಿಶೇಷವಾಗಿತ್ತು.ಆನಂದಪುರದಲ್ಲಿ ಸಡಗರದ ರಾಮನವಮಿ ಆಚರಣೆ
ಆನಂದಪುರ: ರಾಮನವಮಿಯ ಪ್ರಯುಕ್ತ ಬುಧವಾರ ಬಸವನಬೀದಿಯಾ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ಶ್ರೀರಾಮ ಮಂದಿರ, ಕೋಟೆ ಆಂಜನೇಯ ಸ್ವಾಮಿ, ರಂಭಾಪುರಿ ಆಂಜನೇಯ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇ ರಿದ್ದು. ಆಗಮಿಸಿದಂತಹ ಭಕ್ತಾದಿಗಳಿಗೆ ಎಲ್ಲಾ ದೇವಾಲಯಗಳಲ್ಲಿ ಪಾನಕ , ಕೋಸಂಬರಿ, ರಸಾಯನ ವಿತರಿಸಲಾಯಿತು. ಅಲ್ಲದೆ ರಾಮನವಮಿಯ ಪ್ರಯುಕ್ತ ದೇವರಿಗೆ ವಿಶೇಷ ಹೂವಿನ ಅಲಂಕಾರವನ್ನು ಮಾಡಲಾಗಿತ್ತು.