ಕನ್ನಡಪ್ರಭ ವಾರ್ತೆ ರಾಮದುರ್ಗ
ಇಲ್ಲಿನ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಹಾಲಿ ಆಡಳಿತ ಮಂಡಳಿ ಬಣದ ವಿರುದ್ಧದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕಳೆದ ಹತ್ತು ವರ್ಷಗಳಿಂದಲೂ ಒಂದೇ ಕುಟುಂಬದವರು ಕಾರ್ಖಾನೆಯ ಆಡಳಿತ ನಡೆಸುತ್ತಿದ್ದಾರೆ. ಅವರಿಗೆ ಕಬ್ಬು ಬೆಳೆಗಾರರು, ಷೇರುದಾರರು ಕಣ್ಣಿಗೆ ಕಾಣುವುದಿಲ್ಲ. ಅವರಿಗೆ ಪೈಪೋಟಿ ನೀಡಲು ಪಕ್ಕದ ಪರ್ಯಾಯ ಪೆನೆಲ್ ಪಕ್ಷಾತೀತ, ಜ್ಯಾತ್ಯಾತೀತವಾಗಿ ಅಸ್ತಿತ್ವಕ್ಕೆ ಬಂದಿದೆ. ಎಲ್ಲರೂ ಕಾರ್ಖಾನೆಯ ಆಡಳಿತ ಹಿಡಿದಿಟ್ಟುಕೊಳ್ಳಲು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಚುನಾವಣೆಯಲ್ಲಿ ಗೆಲವು ಸಾಧ್ಯ ಎಂದರು.
ಬದಲಾವಣೆಯ ಗಾಳಿ ಬೀಸುತ್ತಿದೆ. ಪದೇ ಪದೇ ಅಧಿಕಾರ ರುಚಿ ಸವಿದವರು ಅಧಿಕಾರದ ದರ್ಪದಲ್ಲಿ ಸಾಗುತ್ತಿದ್ದಾರೆ. ಎಲ್ಲ ಕಡೆಗಳಲ್ಲಿಯೂ ಹಣ ಪ್ರಭಾವ ನಡೆಯುವುದಿಲ್ಲ. ಬಹಳಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದವರು ಕಾರ್ಖಾನೆಯಲ್ಲಿ ಅಭಿವೃದ್ಧಿ ಮಾಡಿಲ್ಲ. ಮಾಜಿ ಶಾಸಕ ಬಿ.ಬಿ. ಹಿರೇರಡ್ಡಿ ಅವರು ಫೋಟೋ ಬಳಸಿಕೊಂಡು ಪ್ರತ್ಯೇಕ ಪೆನೆಲ್ನಲ್ಲಿ ಚುನಾವಣೆ ಎದುರಿಬೇಕಿದೆ ಎಂದು ಸಾಲಾಪೂರದ ಲಕ್ಷ್ಮಣ ಕನಸಗೇರಿ ಹೇಳಿದರು.ಕಳೆದ ಚುನಾವಣೆಯಲ್ಲಿ ಬಹುತೇಕ ಷೇರುದಾರರ ಮತದಾನ ಹಕ್ಕು ರದ್ದು ಪಡಿಸಿ ಕೆಲವೇ ಷೇರುದಾರರ ಮೂಲಕ ಅಧಿಕಾರಕ್ಕೆ ಬಂದಿರುವ ಹಾಲಿ ಆಡಳಿತ ಮಂಡಳಿ ಎಲ್ಲ ಕಸರತ್ತುಗಳನ್ನು ಮಾಡಲಿದೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಸಜ್ಜಾಗಬೇಕು ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಮೇಶ ದೇಶಪಾಂಡೆ ಕರೆ ನೀಡಿದರು.
ಖಾನಪೇಟೆಯ ಧನಲಕ್ಣ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರಾಮದುರ್ಗ, ಬೈಲಹೊಂಗಲ, ಕಿತ್ತೂರು, ಸವದತ್ತಿ ಭಾಗದ ರೈತರೂ ಷೇರುದಾರರಿದ್ದಾರೆ. ಆಯಾ ಭಾಗಕ್ಕೂ ಒಂದೊಂದು ನಿರ್ದೇಶಕ ಸ್ಥಾನದ ಆಕಾಂಕ್ಷಿಗಳಿಗೆ ಅವಕಾಶ ನೀಡಿ ಒಕ್ಕೂರಲಿನ ಒಗ್ಗಟ್ಟು ಪ್ರದರ್ಶಿಸಲು ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು. ಈ ವೇಳೆ ಪಂಚಮಸಾಲಿ ಸಮಾಜದ ಮುಖಂಡ ಪರುತಗೌಡ ಪಾಟೀಲ, ಸಿ.ಬಿ.ಪಾಟೀಲ, ವೈ.ಎಚ್. ಪಾಟೀಲ, ಲಚ್ಚಪ್ಪ ಕಾಮಣ್ಣವರ, ಬಸವರಾಜ ಹಿರೇರಡ್ಡಿ, ಕೆ.ವಿ. ಪಾಟೀಲ, ಮೆಟಗುಡ್ಡ, ಕಲ್ಲಣ್ಣ ವಜ್ರಮಟ್ಟಿ ಸೇರಿದಂತೆ ಸವದತ್ತಿ, ಕಿತ್ತೂರು, ಬೈಲಹೊಂಗಲ ಭಾಗದ ರೈತರು ಸಭೆಯಲ್ಲಿ ಇದ್ದರು.