ಧನಗರಗೌಳಿ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ: ಬಾಲಕೃಷ್ಣ ನಾಯಕ್

KannadaprabhaNewsNetwork |  
Published : Jul 14, 2026, 02:30 AM IST
ಫೋಟೋ ಜು.೧೩ ವೈ.ಎಲ್.ಪಿ. ೦೧ | Kannada Prabha

ಸಾರಾಂಶ

ಧನಗರಗೌಳಿ ಸಮುದಾಯ ಅತ್ಯಂತ ಮುಗ್ಧ ಸಮಾಜ. ಆರ್ಥಿಕವಾಗಿ ಹಿಂದುಳಿದರೂ, ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿದೆ.

ಕನ್ನಡಪ್ರಭ ವಾರ್ತೆ ಯಲ್ಲಾಪುರ

ಧನಗರಗೌಳಿ ಸಮುದಾಯ ಅತ್ಯಂತ ಮುಗ್ಧ ಸಮಾಜ. ಆರ್ಥಿಕವಾಗಿ ಹಿಂದುಳಿದರೂ, ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚೆಗೆ ಗಣನೀಯವಾಗಿ ಮುಂದೆ ಬರುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ಸಮಾಜ ಸೇವಕ ಬಾಲಕೃಷ್ಣ ನಾಯಕ್ ಹೇಳಿದರು.

ತಾಲೂಕಿನ ಲಕ್ಷ್ಮೀ ವೇದವ್ಯಾಸ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಧನಗರಗೌಳಿ ಯುವ ಸೇನೆ ಹಮ್ಮಿಕೊಂಡಿದ್ದ ಉತ್ತರ ಕನ್ನಡ, ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಯ ೧೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಸಮಾಜದಲ್ಲಿ ಇತ್ತೀಚೆಗೆ ಭಾರತೀಯ ಸೇನೆಗೆ ಸೇರುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಸಮಾಜದ ಏಳಿಗೆಗಾಗಿ ಸಹಕಾರ ನೀಡಲು ಸದಾ ಸಿದ್ಧ ಎಂದರು.

ಧನಗರಗೌಳಿ ಸಮಾಜದ ಮೊಟ್ಟ ಮೊದಲ ಲೆಕ್ಕಪರಿಶೋಧಕ ಭಾಗು ಡೋಯಿಪೊಡೆ ಮಾತನಾಡಿದರು.

ರಾಜ್ಯ ಯುವ ಸೇನೆಯ ರಾಜ್ಯಾಧ್ಯಕ್ಷ ಸಂತೋಷ್ ವರಕ್ ಅಧ್ಯಕ್ಷತೆ ವಹಿಸಿದ್ದರು.

ಧನಗರಗೌಳಿ ಸಮಾಜದ ಹಿರಿಯ ಬಮ್ಮು ಬೀರು ಎಡಗೆ, ಗ್ರಾಪಂ ಮಾಜಿ ಅಧ್ಯಕ್ಷ ವಿಠ್ಠು ಶೆಳಕೆ, ಯುವ ಸೇನೆಯ ಪ್ರಧಾನ ಕಾರ್ಯದರ್ಶಿ ಕೊಂಡು ಭಾವಧಾನೆ, ವೇಣುಗೋಪಾಲ್ ಪಟಕಾರೆ, ಉಪಾಧ್ಯಕ್ಷ ಬಾಬು ಶೇಂಡಗೆ, ಖಜಾಂಚಿ ಲಕ್ಷ್ಮಣ ಕೋಕರೆ, ಸಂಘಟನಾ ಕಾರ್ಯದರ್ಶಿ ಬಮ್ಮು ಫೋಂಡೆ, ಗ್ರಾಪಂ ಮಾಜಿ ಸದಸ್ಯ ನಯನಾ ಶೇಂಡಗೆ, ನಿವೃತ್ತ ಸೈನಿಕ ಧೂಳು ಶಿಂಧೆ, ಹಿರಿಯರಾದ ಧೂಳು ಡೋಯಿಪೊಡೆ, ಮಾಲು ವರಕ್, ಸಾಮು ಜೋರೆ, ರಾಮು ಬಿಚ್ಚುಕಲೆ, ಜಾನು ಪಾಂಡ್ರಮೀಸೆ, ಯುವ ಸೇನೆಯ ಪಾದಾಧಿಕಾರಿಗಳು ಹಾಗೂ ಇತರರು ಇದ್ದರು.

ಯುವ ಸೇನೆಯ ರಾಜ್ಯ ಗೌರವಾಧ್ಯಕ್ಷ ಲಕ್ಷ್ಮಣ ಬೋಡಕೆ ಸ್ವಾಗತಿಸಿದರು. ವನವಾಸಿ ವಿದ್ಯಾರ್ಥಿ ನಿಲಯದ ಮಕ್ಕಳು ಪ್ರಾರ್ಥಿಸಿದರು. ಸಂಚಾಲಕ ಭರತ್ ಕೋಕ್ರೆ ಪ್ರಾಸ್ತಾವಿಕ ಮಾತನಾಡಿದರು. ಸಿದ್ದು ಜಾನಕರ್ ನಿರೂಪಿಸಿದರು. ಲಕ್ಷ್ಮಣ ಕೋಕ್ರೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿಟಲ್ ಸ್ಕಾಲರ್ಸ್ ಅಕಾಡೆಮಿ: ನೋಟ್ ಬುಕ್ ವಿತರಣೆ
ಸಾರ್ವಜನಿಕರ ಸಹಭಾಗಿತ್ವ ಇಲ್ಲದಿದ್ದರೇ ನಿರೀಕ್ಷಿತ ಗುರಿ ತಲುಪಲು ಸಾಧ್ಯವಿಲ್ಲ