ಕಲಬುರಗಿ: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಯುತ್ತಿದೆ. ಮುಸುಕುಧಾರಿ ತೋರಿಸಿದಂತೆ ಅಲ್ಲಿ ಯಾವುದೇ ಶವಗಳು ಹೂತಿರುವ ಸಾಕ್ಷಿಗಳು ಸಿಕ್ಕಿಲ್ಲ. ಇದು ಕರ್ನಾಟಕ ಸರ್ಕಾರದ ಆಡಳಿತಕ್ಕೆ ಮಂಕುಬೂದಿ ಎರಚುವ ಕೆಲಸ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುಶಾಂತ್ ಟೆಂಗಳಿ, ರಾಕೇಶ್ ಜಮಾದಾರ್, ಮಲಕಣ್ಣಗೌಡ ಹಿರೇಪೂಜಾರಿ, ಮಡಿವಾಳಪ್ಪ ಅಮರಾವತಿ, ರೋಹಿತ್, ಶ್ರೀಶೈಲ, ಮೋಹನ್ ಮತ್ತಿತರರಿದ್ದರು.
ಮಳೆಯಿಂದ ನೊಂದವರಿಗೆ ಪರಿಹಾರ ನೀಡಿಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಲ್ಲಿ 149 ಮೀ.ಮೀ.ಮಳೆಯಾಗಿದ್ದರಿಂದ ಜೋಪಡಪಟ್ಟಿ ಹಾಗೂ ಬುಗ್ಗಿ ಪ್ರದೇಶದ ವಿದ್ಯಾನಗರದಲ್ಲಿ ಸಾಕಷ್ಟು ಹಾನಿಯಾಗಿದ್ದು, ಕೂಡಲೇ ಸೂಕ್ತ ಪರಿಹಾರ ನೀಡುವಂತೆ ಶಿವಸೇನೆಯ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ದಿನಗಳಿಂದ ಸುರಿದ ಮಳೆಯಿಂದಾಗಿ ೧೫೦ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಒಂದು ವರ್ಷದ ದವಸ ಧಾನ್ಯ ನೀರು ಪಾಲಾಗಿದ್ದು, ಕೂಡಲೇ ಜೋಪಡ ಪಟ್ಟಿಯ ಪ್ರತಿ ಮನೆಗೆ 20 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ಶಾಸಕರು ಬೆಳೆ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 25 ಸಾವಿರ ರು. ಪರಿಹಾರ, ತೋಟಗಾರಿಕೆ ಬೆಳೆಗೆ 50 ಸಾವಿರ ರು. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಇಂದು ಪ್ರತಿಭಟನೆ:ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಸೆ.1ರಂದು ಬೀದರ್, ಬೆಂಗಳೂರು ರಾಜ್ಯ ಹೆದ್ದಾರಿಯ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.