ಕನ್ನಡಪ್ರಭ ವಾರ್ತೆ ಹೊಳೆಹೊನ್ನೂರು
ಸಮೀಪದ ಆಗರದಹಳ್ಳಿಯಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಕೈಮರ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ನಡೆದ ಸಾಮೂಹಿಕ ಶಿವ ಪಾರ್ವತಿ ಕಲ್ಯಾಣೋತ್ಸವ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ಅವರು ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರ ಮಾಡುವಷ್ಟು ಸೇವಾ ಕಾರ್ಯಗಳನ್ನು ಶ್ರೀ ಕ್ಷೇತ್ರದ ಯೋಜನೆ ಮಾಡುತ್ತಿದೆ. ಕ್ಷೇತ್ರದ ಮೇಲಿನ ಪ್ರೀತಿ ಹಾಗೂ ಭಕ್ತಿ ಪೂರ್ವಕ ಭಾವನೆಗಳು ಯೋಜನೆಯ ಯಶಸ್ವಿಗೆ ಕಾರಣವಾಗಿವೆ. ಗ್ರಾಮಾಭಿವೃದ್ಧಿ ಸಂಸ್ಥೆ ಹಣಕಾಸಿ ವ್ಯವಹಾರದೊಂದಿಗೆ ದಾರ್ಮಿಕ ಕಾರ್ಯಗಳಿಗೆ ಒತ್ತು ನೀಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಸಂಘದ ಹೆಣ್ಣು ಮಕ್ಕಳನ್ನು ಕಂಡು ಮೊದಲು ಮೂದಲಿಸುತ್ತಿದ್ದವರು ಇಂದು ಚಪ್ಪಾಳೆ ತಟ್ಟುತ್ತಿದ್ದಾರೆ ಎಂದು ಹೇಳಿದರು.ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿ.ಹನುಮಂತು ಮಾತನಾಡಿ, ಮಹಿಳೆಯರಿಗೆ ಆರ್ಥಿಕ ಶಕ್ತಿ ಮತ್ತು ಕುಟುಂಬ ನಿರ್ವಹಣೆಯ ಜಾಣ್ಮೆಯನ್ನು ರೂಪಿಸುವ ಕಾರ್ಯವನ್ನು ಸಂಸ್ಥೆಯು ಕಳೆದ 20 ವರ್ಷಗಳಿಂದ ಮಾಡಿಕೊಂಡು ಬರುತ್ತಿದೆ ಎಂದರು.
ಯೋಜನಾಧಿಕಾರಿ ಅಜಯ್ ಮಾತನಾಡಿ ತಾಲೂಕಿನಲ್ಲಿ 4,250 ಸ್ವ ಸಹಾಯ ಸಂಘಗಳಲ್ಲಿ 37,500 ಜನ ಸದಸ್ಯರಿದ್ದಾರೆ. 106 ಜನರಿಗೆ ಮಾಶಾಸನ ನೀಡಲಾಗುತ್ತಿದೆ. ವಲಯ ವ್ಯಾಪ್ತಿಯ 7 ದೇವಸ್ಥಾನದ ಜೀರ್ಣೋದ್ದಾರಕ್ಕೆ 8 ಲಕ್ಷ ದೇಣಿಗೆ ನೀಡಲಾಗಿದೆ. ಪ್ರತಿಯೊಬ್ಬರಲ್ಲೂ ಧಾರ್ಮಿಕ ಪ್ರಜ್ಞೆ ಬೆಳೆಯಬೇಕು. ಕ್ಷೇತ್ರದ ಅಧ್ಯಯನ ಪ್ರವಾಸಗಳು ರೈತಾಪಿಗಳ ಪಾಲಿಗೆ ಸಂಜೀವಿನಿಯಾಗಿದೆ. ಕುಟುಂಬಗಳು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸದಸ್ಯರು ಯೋಜನೆಯ ಲಾಭಗಳನ್ನು ಸದ್ಭಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾಲಂಬಿಗಳಾಗಬೇಕು ಎಂದರು.