ಕನ್ನಡಪ್ರಭ ವಾರ್ತೆ ಗೌರಿಬಿದನೂರು
ನಗರದ ವೀರಶೈವ ಲಿಂಗಾಯಿತ ಸೇವಾ ಸಮಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಸಿದ್ದರಬೆಟ್ಟದಲ್ಲಿ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜೂ.9 ರಂದು ಭಾನುವಾರ ಬೆಳಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಪುಸ್ತಕ ದಾಸೋಹ , ಮಹಾರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆ,ಉಚಿತ ಸಾಮೂಹಿಕ ದೀಕ್ಷೆ, ಪಲ್ಲಕ್ಕಿ ಉತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗಿದೆ , ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ವಹಿಸಲಿದ್ದು, ದಿವ್ಯ ಸಾನಿಧ್ಯವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಲಿದ್ದಾರೆ, ಸರ್ವ ಧರ್ಮದ ಭಕ್ತಾಧಿಗಳು ಈ ಸಮಾರಂಭಕ್ಕೆ ಭಾಗವಹಿಸುವಂತೆ ಕೋರಿದರು.
ಸಮಾಜದಲ್ಲಿ ಧರ್ಮ ಜಾಗೃತಿಯ ಜೊತೆಗೆ ಪರಿಸರವನ್ನು ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕಿದೆ. ಶ್ರೀ ಕ್ಷೇತ್ರದ ಸಮಾರಂಭದಲ್ಲಿ 6 ಸಾವಿರ ಸಸಿಗಳನ್ನು ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.1.25 ಕೋಟಿ ರು. ದಾಸೋಹ ಭವನ:
ವಾರ್ಷಿಕೋತ್ಸವಕ್ಕೆ ಬಸ್ ವ್ಯವಸ್ಥೆ:
ಸುದ್ದಿಗೋಷ್ಠಿಯಲ್ಲಿ ಶ್ರೀ ವೀರಶೈವ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಖಜಾಂಚಿ ನಂಜುಂಡಪ್ಪ, ನಿರ್ದೇಶಕರಾದ ಜಿ.ಆರ್.ಪ್ರವೀಣ್ ಕುಮಾರ್, ದೇವಿಮಂಜುನಾಥ್, ಎಚ್.ಪಿ.ನಟರಾಜ್, ಜಗದಾಂಬ, ಸತೀಶ್, ಫ್ಯಾಕ್ಟರಿ ನಟರಾಜ್, ನಾಗರಾಜ್, ಸಮುದಾಯದ ಮುಖಂಡರಾದ ಗೌರೀಶ್, ಎನ್.ಆರ್.ರವಿಕುಮಾರ್, ಟಿ.ಜಿ.ಗಂಗಾಧರಪ್ಪ, ಶಿವಕುಮಾರ್ ಆರಾಧ್ಯ, ಮಹೇಂದ್ರ, ಬಸವರಾಜು, ಮುಂತಾದವರು ಭಾಗವಹಿಸಿದ್ದರು.