ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸಮತೋಲನದ ನೃತ್ಯ
ಧರ್ಮೇಂದ್ರ ಅವರ ತಲೆ ಮೇಲೆ ನಿಂತ ಒನಕೆ ಸಮತೋಲನ ಕಳೆದುಕೊಳ್ಳದಂತೆ ಚಾಕಚಾಕ್ಯತೆಯಿಂದ ತಮಟೆ ವಾದ್ಯಕ್ಕೆ ಅನುಗುಣವಾಗಿ ಗೆಜ್ಜೆಯ ಕಾಲಿನ ತಾಳದೊಂದಿಗೆ ಲಯಬದ್ಧವಾಗಿ ಎರಡೂ ಕೈಗಳನ್ನು ಬಿಟ್ಟು ನರ್ತಿಸಿದರು. ಸುಮಾರು ಅರ್ಧ ಗಂಟೆ ಹೆಚ್ಚು ಕಾಲ ಕುಣಿದ ಬಾಲಾಜಿ ಅವರ ನೃತ್ಯವನ್ನು ಸುತ್ತಮುತ್ತಲಿನ ರಸ್ತೆ ಬದಿ, ಕಟ್ಟಡದ ಮೇಲೆ ನಿಂತು ಜನರು ವೀಕ್ಷಿಸಿದರು. ಕಳೆದ 8 ದಿನಗಳಿಂದ ನಗರದಲ್ಲಿ ಶ್ರೀ ಧರ್ಮರಾಯಸ್ವಾಮಿ ಹೂವಿನ ಕರಗ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಚಿಕ್ಕಬಳ್ಳಾಪುರ ನಗರ ಸೇರಿದಂತೆ ಗ್ರಾಮೀಣ ಪ್ರದೇಶ ಹಾಗೂ ಕೋಲಾರ ಮತ್ತು ಬೆಂಗಳೂರು ಗ್ರಾಮಂತರ ಜಿಲ್ಲೆಗಳಿಂದಲೂ ಚಿಕ್ಕಬಳ್ಳಾಪುರದ ಹೆಸರಾಂತ ಈ ಕರಗ ವೀಕ್ಷಿಸಲು ಆಗಮಿಸಿ ಸಾಕ್ಷಿಯಾಗಿದ್ದರು.ವಿವಿಧ ಭಂಗಿಗಳಲ್ಲಿ ನೃತ್ಯಇದರ ಭಾಗವಾಗಿ ಕಡೆಯ ದಿನವಾದ ಸೋಮವಾರ ಕರಗದ ಪೂಜಾರಿ ಕೆ ಧರ್ಮೇಂದ್ರ ಹಾಗೂ ಅವರ ಸಹಚರರು ಒನಕೆ ಕರಗ ಹೊತ್ತು ವಿವಿಧ ಭಂಗಿಗಳಲ್ಲಿ ನೃತ್ಯ ಪ್ರದರ್ಶಿಸುವ ಮೂಲಕ ಶ್ರೀ ಜಲಾರಿ ಗಂಗಮಾಂಭ ದೇವಾಲಯದ ಧರ್ಮರಾಯಸ್ವಾಮಿ ಹೂವಿನ ಕರಗಕ್ಕೆ ಕಳೆ ತಂದುಕೊಟ್ಟರು.
ಕರಗ ಉತ್ಸವಕ್ಕೆ ತೆರೆ: ಜಿಲ್ಲಾ ಕೇಂದ್ರದಲ್ಲಿ ಪ್ರತಿ ವರ್ಷ ಭಕ್ತಿಭಾವದಿಂದ ನಡೆಸುವ ಜಾಲಾರಿ ಗಂಗಮ್ಮದೇವಿಯ ಧರ್ಮರಾಯಸ್ವಾಮಿಯ 62 ನೇ ವರ್ಷದ ಹೂವಿನ ಕರಗ ಮಹೋತ್ಸವ ಸೋಮವಾರ ಅಪರೂಪದ ಒನಕೆ ಕರಗ ನೃತ್ಯ ಪ್ರದರ್ಶನದೊಂದಿಗೆ ಸಂಪನ್ನಗೊಂಡಿತು. ಕಡೆಯ ದಿನದಂದು ದೇವರಿಗೆ ವಿಶೇಷ ಪೂಜೆ ಮತ್ತಿತರ ಧಾರ್ಮಿಕ ಕೈಂಕಾರ್ಯಗಳನ್ನು ಭಕ್ತಾದಿಗಳಿಂದ ನೆರವೇರಿತು.