ಶೀರೂರು ಪರ್ಯಾಯ: ಧರ್ಮಸ್ಥಳದಿಂದ ಹೊರೆ ಕಾರಣಿಕೆ

KannadaprabhaNewsNetwork |  
Published : Jan 14, 2026, 04:00 AM IST
ಶ್ರೀಕ್ಷೇತ್ರ ಧರ್ಮಸ್ಥಳದಿಂದ ಶಿರೂರು ಪರ್ಯಾಯೋತ್ಸವಕ್ಕೆ ಹೊರೆಕಾಣಿಕೆ ಸಲ್ಲಿಸಲಾಯಿತು | Kannada Prabha

ಸಾರಾಂಶ

ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ 50 ಕ್ವಿಂಟಲ್ ಸೋನಾ ಮಸೂರಿ ಅಕ್ಕಿ ಮತ್ತು 15 ಕ್ವಿಂಟಲ್ ತರಕಾರಿಯನ್ನು ಶ್ರೀ ಕೃಷ್ಣನ ಸನ್ನಿಧಾನಕ್ಕೆ ಸಲ್ಲಿಸಲಾಯಿತು.

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪರ್ಯಾಯೋತ್ಸವ ಸಮಿತಿ ಗೌರವಾಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ 50 ಕ್ವಿಂಟಲ್ ಸೋನಾ ಮಸೂರಿ ಅಕ್ಕಿ ಮತ್ತು 15 ಕ್ವಿಂಟಲ್ ತರಕಾರಿಯನ್ನು ಶ್ರೀ ಕೃಷ್ಣನ ಸನ್ನಿಧಾನಕ್ಕೆ ಸಲ್ಲಿಸಲಾಯಿತು. ಶೀರೂರು ಪರ್ಯಾಯದ ಮೊದಲ‌ದಿನದ ಹೊರೆಕಾಣಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ‌ ಸಲ್ಲಿಕೆಯಾಗಿತ್ತು. ಇದೀಗ ಶ್ರೀ ಕ್ಷೇತ್ರದ ವತಿಯಿಂದ ಎರಡನೇ ಹೊರೆಕಾಣಿಕೆ ಸಲ್ಲಿಕೆಯಾಯಿತು. ಹೊರೆಕಾಣಿಕೆ ತಂದು ಸಲ್ಲಿಸಿದ ಭಕ್ತರಿಗೆ ಶಿರೂರು ಶ್ರೀ ವೇದವರ್ದನ ಶ್ರೀಪಾದಂಗಳವರು ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರುಧರ್ಮಸ್ಥಳ ಅನ್ನಪೂರ್ಣ ಛತ್ರದ ಪ್ರಬಂಧಕ ಸುಬ್ರಮಣ್ಯ ಪ್ರಸಾದ್, ಶ್ರೀ ಮಠದ ದಿವಾನ ಉದಯಕುಮಾರ ಸರಳತ್ತಾಯ, ಹೊರೆಕಾಣಿಕೆ ಸಮಿತಿ ಸಂಚಾಲಕ ಸುಪ್ರಸಾದ್ ಶೆಟ್ಟಿ ಬೈಕಾಡಿ, ಪರ್ಯಾಯೋತ್ಸವ ಸಮಿತಿ ಕಾರ್ಯದರ್ಶಿ ಮೋಹನ್ ಭಟ್, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ನಾಗರಾಜ್ ಶೆಟ್ಟಿ, ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ದಿಲೀಪ್ ಜೈನ್, ಪ್ರಚಾರ ಸಮಿತಿಯ ನಂದನ್ ಜೈನ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ