ಕನ್ನಡಪ್ರಭ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.28ರಿಂದ ಅ. 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು.
ಕಮ್ಮಟದ ಶಿಬಿರಾರ್ಥಿಗಳ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದೊಂದಿಗೆ ತಾಲೂಕು ಮಟ್ಟದಲ್ಲಿ ಭಜನಾ ಪರಿಷತ್ ಸಭೆಗಳು ನಡೆಯುತ್ತಿವೆ. ಸೆ.27ರಂದು ಮಧ್ಯಾಹ್ನ 2.30ರಿಂದ ಶಿಬಿರಾರ್ಥಿಗಳ ನೋಂದಣಿ ಆರಂಭವಾಗಲಿದೆ ಎಂದರು.ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ. ಚಂದ್ರಶೇಖರ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಸೀತಾರಾಮ ತೋಳ್ಪಾಡಿತ್ತಾಯ, ಬಿ. ಭುಜಬಲಿ, ಲಕ್ಷ್ಮೀನಾರಾಯಣ ರಾವ್, ಪಾರ್ಶ್ವನಾಥ್ ಜೈನ್, ಮಹಾವೀರ ಅಜ್ರಿ, ಕೇಶವ ಪಿ., ಡಾ. ಶಶಿಕಾಂತ್ ಜೈನ್, ರತ್ನವರ್ಮ ಜೈನ್ ಹಾಗೂ ಶ್ರೀ ನಿವಾಸ ರಾವ್ ಉಪಸ್ಥಿತರಿದ್ದರು. ಪವಿತ್ರ ಸುನಿಲ್ ಸ್ವಾಗತಿಸಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ನಿರ್ವಹಿಸಿದರು.