ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ: ಅಭಯಚಂದ್ರ ಜೈನ್

KannadaprabhaNewsNetwork |  
Published : Dec 09, 2025, 01:45 AM IST
ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗೆ ಶಕ್ತಿ : ಮಾಜಿ ಸಚಿವ ಅಭಯಚಂದ್ರ ಜೈನ್ | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ತಾಲೂಕು ಇದರ ವತಿಯಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದನ್ವಯ ಭಾನುವಾರ ಧವಲಾ ಕಾಲೇಜಿನಲ್ಲಿ ತಾಲೂಕು ಮಟ್ಟದ ವಿಚಾರಗೋಷ್ಠಿ ನಡೆಯಿತು.

ಮೂಡುಬಿದಿರೆ: ಒಂದು ಕಾಲದಲ್ಲಿ ಹೆಣ್ಣು ಕೇವಲ ಅಡಿಗೆ ಕೋಣೆಗೆ ಸೀಮಿತವಾಗಿದ್ದಳು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಮೇಲೆ, ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ ನಂತರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂದ ನಂತರ ಹೆಣ್ಣು ಮಕ್ಕಳಿಗೆ ಶಕ್ತಿ ಬಂದಿದೆ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮೂಡುಬಿದಿರೆ ತಾಲೂಕು ಇದರ ವತಿಯಿಂದ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದನ್ವಯ ಭಾನುವಾರ ಧವಲಾ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹಿಂದೆ ಕಾರ್ಕಳ ತಾಲೂಕಿನಲ್ಲಿದ್ದ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರವನ್ನು ಮೂಡುಬಿದಿರೆಗೆ ವಿಸ್ತರಿಸುವಂತೆ ತಾನು ಶಾಸಕನಾಗಿದ್ದ ಸಂದರ್ಭದಲ್ಲಿ ಹೆಗ್ಗಡೆ ಬಳಿ ಮನವಿ ಮಾಡಿದ್ದೆ ಈ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಶಕ್ತಿ ತುಂಬಲಾಗಿದ್ದು ಆ ಕಾರಣದಿಂದಲೇ ಇಂದು ಹೆಣ್ಣು ಮಕ್ಕಳು ಆದಾಯ ಗಳಿಸಲು, ರಾಜಕೀಯಕ್ಕೆ ಪ್ರವೇಶಿಸಲು ಹಾಗೂ ವೇದಿಕೆಗೆ ಬಂದು ಮಾತನಾಡಲು ಸಹಕಾರಿಯಾಗಿದೆ ಎಂದರು.ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಸಂಚಾಲಕ ಕೆ. ಹೇಮರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೂಡುಬಿದಿರೆ ಠಾಣೆಯ ಉಪ ನಿರೀಕ್ಷಕಿ ಪ್ರತಿಭಾ ಪೊಕ್ಸೋ ಕಾಯಿದೆ, ಸೈಬರ್ ಕ್ರೈಮ್, ಆನ್ ಲೈನ್ ವಂಚನೆ,ಡಿಜಿಟಲ್ ಸ್ಕ್ಯಾಮ್ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತ ಪ್ರಾಂಶುಪಾಲೆ ಪ್ರೊ. ಮಿತ್ರ ಪ್ರಭಾ ಹೆಗ್ಡೆ ‘ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ’ ಕುರಿತು ಮಾತನಾಡಿದರು. ಪುರಸಭೆಯ ಅಧ್ಯಕ್ಷೆ ಜಯಶ್ರೀ ಕೇಶವ್, ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಮುಖ್ಯ ಅತಿಥಿಗಳಾಗಿದ್ದರು.ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ಬಿ. ಧನಂಜಯ ಸ್ವಾಗತಿಸಿದರು. ಸಿಂಚನ ಜ್ಞಾನ ವಿಕಾಸ ಕೇಂದ್ರ ಕರಿಯನಂಗಡಿ ಇದರ ಸದಸ್ಯೆ ಪದ್ಮಾವತಿ, ಧನಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಮೂಡುಕೊಣಾಜೆಯ ಸದಸ್ಯೆ ಲತಾ ಹೆಗ್ಡೆ ಅನಿಸಿಕೆ ಹಂಚಿಕೊಂಡರು. ಲೆಕ್ಕ ಪರಿಶೋಧಕ ನಾಗೇಶ್ ಹೆಗ್ಡೆ ನಿರೂಪಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ವಿದ್ಯಾ ವಂದಿಸಿದರು. ನಂತರ ಜ್ಞಾನ ವಿಕಾಸ ಮಹಿಳಾ ತಂಡಗಳಿಂದ ಸಾಂಸ್ಕೃತಿಕ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ನಿವೃತ್ತಿ ಇಲ್ಲದವರು: ಗೋಕುಲ್ ಶೆಟ್ಟಿ
ಭದ್ರಕಾಳಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸೋಲಾರ್ ಘಟಕ ಲೋಕಾರ್ಪಣೆ