ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮಾಜಮುಖಿ ಕಾರ್ಯ: ಸುಧಾ ಗಾಂವಕರ

KannadaprabhaNewsNetwork |  
Published : Dec 20, 2025, 02:15 AM IST
19ಎಸ್‌ಜಿಪಿ2ಸಿರುಗುಪ್ಪ ನಗರದ ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಟ್ಯೂಷನ್‌ ಕ್ಲಾಸ್‌ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಸುಧಾ ಗಾಂವಕರ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶ-ವಿದೇಶಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಸಿದ್ಧಿ ಹೊಂದಿದೆ ಎಂದು ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಸುಧಾ ಗಾಂವಕರ ಹೇಳಿದರು.

ಸಿರುಗುಪ್ಪ: ಪ್ರಗತಿನಿಧಿ ನೀಡುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ದೇಶ-ವಿದೇಶಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಸಿದ್ಧಿ ಹೊಂದಿದೆ ಎಂದು ಕಲ್ಯಾಣ ಕರ್ನಾಟಕ ವಿಭಾಗದ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಸುಧಾ ಗಾಂವಕರ ಹೇಳಿದರು.

ನಗರದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ 10ನೇ ತರಗತಿಯ ಶಾಲಾ ಮಕ್ಕಳಿಗೆ 3 ತಿಂಗಳ ವರೆಗೆ ಜ್ಞಾನವಿಕಾಸ ಕಾರ್ಯಕ್ರಮದಡಿ ಉಚಿತವಾಗಿ ಟ್ಯೂಷನ್‌ ಕ್ಲಾಸ್‌ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಅಭಿವೃದ್ಧಿ ಕಾರ್ಯಕ್ರಮದ ಜೊತೆಗೆ ಜ್ಞಾನದೀಪ ಶಾಲಾ ಶಿಕ್ಷಣ ಕಾರ್ಯಕ್ರಮದಡಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಾಂತ 1028 ಶಾಲೆಗಳಿಗೆ 10,234 ಜ್ಞಾನದೀಪ ಅತಿಥಿ ಶಿಕ್ಷಕರ ನಿಯೋಜನೆ ಮಾಡಿದೆ.

ನಮ್ಮ ಯೋಜನೆಯ ಪಾಲುದಾರ ಕುಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಒಟ್ಟು 1,17,934 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿದೆ. 60,531 ಶಾಲಾ ಮಕ್ಕಳಿಗೆ ₹32.44 ಕೋಟಿ ಮೌಲ್ಯದ ವಿದ್ಯಾರ್ಥಿ ವೇತನ ಒದಗಿಸಲಾಗಿದೆ. ಇಷ್ಟು ಮಾತ್ರವಲ್ಲದೆ ಹಿಂದೂ ರುದ್ರಭೂಮಿ ಅಭಿವೃದ್ಧಿ, ಗ್ರಾಮ ಕಲ್ಯಾಣ ಯೋಜನೆ, ನವಚೇತನ ಕಾರ್ಯಕ್ರಮ, ಗೋ-ಶಾಲೆ ಅಭಿವೃದ್ಧಿ, ಜನಮಂಗಲ ಕಾರ್ಯಕ್ರಮ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ, ಪ್ರಕೃತಿ ವಿಕೋಪಕ್ಕೆ ಪರಿಹಾರ, ವಿಶೇಷಚೇತನರಿಗೆ ಸಲಕರಣೆಗಳ ವಿತರಣೆ, ನಿರ್ಗತಿಕರಿಗೆ ಮಾಸಾಶನ ವಿತರಣೆ, ನಿರ್ಗತಿಕರಿಗೆ ವಾತ್ಸಲ್ಯ ಕಿಟ್‌ಗಳ ವಿತರಣೆ, ವಾತ್ಸಲ್ಯ ಮನೆ ರಚನೆ, ಶುದ್ಧಗಂಗಾ ಘಟಕಗಳು, ಕೆರೆಗಳ ಹೂಳೆತ್ತುವುದು, ಹೀಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಯೋಜನೆಯು ಬಡವರ ಪಾಲಿನ ಆಶಾಕಿರಣವಾಗಿದೆ ಎಂದು ತಿಳಿಸಿದರು.

ಯೋಜನಾಧಿಕಾರಿಗಳಾದ ಸುಧೀರ್‌ ಹಂಗಳೂರು, ಶಾಲಾ ಮುಖ್ಯಗುರಗಳಾದ ಶಿವಯೋಗಿ, ವಲಯ ಮೇಲ್ವಿಚಾರಕಿ ರೂಪಾ, ಜ್ಞಾನವಿಕಾ ಸಮನ್ವಯಾಧಿಕಾರಿ ಪ್ರಿಯಾ, ಸ್ಥಳೀಯ ಸೇವಾಪ್ರತಿನಿಧಿ ಅಂಬಿಕಾ, ಶಾಲಾ ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಬುದ್ಧ ಭಾರತ ನಿರ್ಮಾಣ ಕನಸು ಕಂಡವರು ಅಂಬೇಡ್ಕರ್‌: ಪ್ರೊ. ವಿಶ್ವನಾಥ
ಅಕ್ಷಯ ಪಾತ್ರೆಗೆ ಆಧುನಿಕ ತಂತ್ರಜ್ಞಾನದ ಯಂತ್ರ