ಪರಿಸರ ರಕ್ಷಣೆ, ಉತ್ತಮ ಗಾಳಿ ಆರೋಗ್ಯ ವೃದ್ಧಿಗೆ ಸಹಕಾರಿ:ಪಿ. ಶಶಿರೇಖಾ

KannadaprabhaNewsNetwork |  
Published : Jun 29, 2024, 12:34 AM IST
35 | Kannada Prabha

ಸಾರಾಂಶ

ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸ

ಕನ್ನಡಪ್ರಭ ವಾರ್ತೆ ಮೈಸೂರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ತಿಲಕ್ ನಗರ ವಲಯದ ಸರಸ್ವತಿಪುರಂ ಕಾರ್ಯಕ್ಷೇತ್ರದಲ್ಲಿ ಪರಿಸರ ದಿನವನ್ನು ಆಚರಿಸಿತು.

ಟ್ರಸ್ಟ್ ನ ಯೋಜನಾಧಿಕಾರಿ ಪಿ. ಶಶಿರೇಖಾ ಅವರು ಗಿಡ ನೆಟ್ಟು ಮಾತನಾಡಿ, ಪರಿಸರ ಸಂರಕ್ಷಿಸುವುದರ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಗಾಳಿ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿ ಎನ್ನುವುದು ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಕನಸಾಗಿದ್ದು, ಅವರ ಕನಸನ್ನು ನನಸು ಮಾಡಲು ರಾಜ್ಯಾದ್ಯಂತ ಗಿಡ ಮರಗಳನ್ನು ಬೆಳಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದರು.

ಕೃಷಿ ಮೇಲ್ವಿಚಾರಕ ರಾಕೇಶ್, ಮೇಲ್ವಿಚಾರಕಿ ಕುಸುಮಾ, ಸೇವಾ ಪ್ರತಿನಿಧಿ ವಿಜಯ, ಒಕ್ಕೂಟದ ಅಧ್ಯಕ್ಷ ಯಶೋದಾ ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ