ಜಮೀನಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ಮೇ 27ರಮದು ತಾಳಿಕೋಟೆ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತರಾದ ಸಾಹೇಬಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ತಾಳಿಕೋಟೆ: ಜಮೀನಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ಮೇ 27ರಮದು ತಾಳಿಕೋಟೆ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತರಾದ ಸಾಹೇಬಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ತಾಲೂಕಿನ ಹಲವಾರು ರೈತರ ಜಮೀನುಗಳಿಗೆ ಹೋಗಲು ದಾರಿ ಸಮಸ್ಯೆ ಇದೆ. ದಾರಿ ಮಾಡಿಕೊಡಬೇಕೆಂದು ಸರಕಾರದ ಸುತ್ತೋಲೆ ಇದ್ದರೂ ಹಾಗೂ ನ್ಯಾಯಾಲಯದ ಆದೇಶ ಇದ್ದರು ಕೂಡಾ ತಹಸೀಲ್ದಾರ್ ದಾರಿ ಮಾಡಿಕೊಡುತ್ತಿಲ್ಲ. ಆದ್ದರಿಂದ ಸೋಮವಾರ ರೈತರೊಂದಿಗೆ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಬೆಂಬಲ ನೀಡಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ ೧೧.೦೦ಕ್ಕೆ ನೇರವಾಗಿ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಕಚೇರಿಯ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.