ಧಾರವಾಡ:
ಇಲ್ಲಿಯ ಜಿಲ್ಲಾ ಪಂಚಾಯಿತಿ ಜಿಲ್ಲಾಡಳಿತವು ಸರ್ಕಾರ ನೌಕರರಿಗೆ ಮಂಗಳವಾರ ಆಯೋಜಿಸಿದ್ದ ಆರ್ಥಿಕ ವಂಚನೆ, ಸೈಬರ್ ಕ್ರೈಂ, ಡಿಜಿಟಲ್ ಅರೆಸ್ಟ್ ಬಗ್ಗೆ ಮತ್ತು ಕೆಜಿಐಡಿ ಸೌಲಭ್ಯಗಳ ಕುರಿತು ವಿಶೇಷ ಉಪನ್ಯಾಸ ಉದ್ಘಾಟಿಸಿದ ಅವರು, ಪ್ರಸ್ತುತ ದಿನಗಳಲ್ಲಿ ಬಹುತೇಕ ಸಾರ್ವಜನಿಕರು, ಸರ್ಕಾರಿ ನೌಕರರು ತಂತ್ರಜ್ಞಾನದ ಬಗ್ಗೆ ಹೆಚ್ಚು ಮಾಹಿತಿ ತಿಳಿದಿಲ್ಲ. ಅದಕ್ಕಾಗಿ ದಿನದಿನಕ್ಕೆ ಸೈಬರ್ ವಂಚನೆಗಳು ಹೆಚ್ಚಾಗಿ ನಡೆಯುತ್ತಿವೆ. ಅಧಿಕಾರಿಗಳು ವ್ಯಕ್ತಿಗನುಗುಣವಾಗಿ ಹುದ್ದೆಯ ಅರ್ಹತೆ ತಿಳಿದುಕೊಳ್ಳಬೇಕು. ಬೇರೆ ಎಲ್ಲ ಇಲಾಖೆಗಳ ಬಗ್ಗೆಯೂ ಮಾಹಿತಿ ಗೊತ್ತಿರಬೇಕು. ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿಕೊಂಡು ಮೋಸ-ವಂಚನೆ ಬಗ್ಗೆ ಮಾಹಿತಿ ನೀಡಿದರೆ ಅತಿ ಉತ್ತಮ ಎಂದರು.
ಸೈಬರ್ ಜಾಗೃತಿ ಹೊಂದಿ:ಹಿರಿಯ ಪೊಲೀಸ್ ಅಧಿಕಾರಿ ಶಿವಾನಂದ ಕಟಗಿ ಮಾತನಾಡಿ, ಸೈಬರ್ ಜಾಗೃತಿ ಅತ್ಯಂತ ಅಗತ್ಯ. ಮಾನವೀಯ ಸಂಬಂಧ, ಬ್ಯಾಂಕಿಂಗ್ ವ್ಯವಸ್ಥೆ, ವ್ಯಾಪಾರ- ವ್ಯವಹಾರಗಳು ಎಲ್ಲವೂ ಡಿಜಿಟಲ್ ಆಗುತ್ತಿರುವ ಈ ಯುಗದಲ್ಲಿ ವಂಚನೆಗಳ ರೂಪವೇ ಬದಲಾಗಿದೆ. ಜಾಗೃತರಾಗಿರದಿದ್ದರೆ, ಅಪರಾಧಿಗಳು ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಸಂಗ್ರಹ ಹಣವನ್ನು ದೋಚಬಹುದು. ಬ್ಯಾಂಕ್ ಖಾತೆ ವಿವರ, ಒಟಿಪಿ, ಎಟಿಎಂ ಪಿನ್, ಆಧಾರ್ ಅಥವಾ ಪ್ಯಾನ್ ವಿವರ ಕೇಳುವ ಯಾವುದೇ ಕರೆ ಅಥವಾ ಸಂದೇಶ ನಂಬಬಾರದು ಹಾಗೂ ಯಾವುದೇ ಬ್ಯಾಂಕ್ ಅಥವಾ ಸರ್ಕಾರಿ ಇಲಾಖೆ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಫೋನ್ ಮೂಲಕ ಕೇಳುವುದಿಲ್ಲ. ಕೇಳಿದರೆ ಅದು ವಂಚನೆ ಎನ್ನುವುದು ನಿಶ್ಚಿತ ಎಂದು ಎಚ್ಚರಿಸಿದರು.
ಕೆಜಿಐಡಿ ಜಿಲ್ಲಾ ವಿಮಾ ಅಧಿಕಾರಿ ಜೆ.ಸಿ. ಕಠಾರಿ ಕೆಜಿಐಡಿ ವಿಮೆ, ವಂತಿಗೆ, ಬೋನಸ್, ಲಾಭ ಮತ್ತು ಹೂಡಿಕೆ ಕುರಿತು ವಿವರವಾಗಿ ವಿವರಿಸಿದರು. ಕೆ. ಶ್ರೀಧರ ಸ್ವಾಗತಿಸಿದರು. ಮಲ್ಲಿಕಾರ್ಜುನ ಸೊಲಗಿ ನಿರೂಪಿಸಿದರು. ಡಾ. ಸುರೇಶ ಹಿರೇಮಠ ವಂದಿಸಿದರು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಡಿಡಿಒಗಳು, ವಿಷಯ ನಿರ್ವಾಹಕರಿದ್ದರು. ವಿಸಿ ಮೂಲಕ ಬಂಧನವಿಲ್ಲ...
ಶಿವಾನಂದ ಕಟಗಿ, ಹಿರಿಯ ಪೊಲೀಸ್ ಅಧಿಕಾರಿ