ಧಾರವಾಡಕ್ಕೆ ಒಲಿದ ಹಲವು ಪ್ರಶಸ್ತಿಗಳ ಗರಿ

KannadaprabhaNewsNetwork |  
Published : Jan 27, 2024, 01:15 AM IST
ಪಂ.ಸೋಮನಾಥ ಮರಡೂರ | Kannada Prabha

ಸಾರಾಂಶ

2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ .ಎನ್‌.ಜಿ. ಮಹಾದೇವಪ್ಪ, 2022-23ನೇ ಸಾಲಿನ ಭಾಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, 2022-23ನೇ ಸಾಲಿನ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಯು ಹಿಂದೂಸ್ತಾನಿ ಗಾಯನಕ್ಕಾಗಿ ಪಂ.ಸೋಮನಾಥ ಮರಡೂರ ಅವರಿಗೆ ನೀಡಲಾಗುತ್ತಿದೆ

ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿ ಘೋಷಣೆ ಮಾಡಿದ್ದು, ಈ ಪೈಕಿ ಧಾರವಾಡದ ಹಲವು ಗಣ್ಯರಿಗೆ ಪ್ರಶಸ್ತಿಗಳು ಸಂದಿವೆ.

2023-24ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ .ಎನ್‌.ಜಿ. ಮಹಾದೇವಪ್ಪ, 2022-23ನೇ ಸಾಲಿನ ಭಾಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಗೆ ಹಿರಿಯ ಸಾಹಿತಿ ಜಿನದತ್ತ ದೇಸಾಯಿ, 2022-23ನೇ ಸಾಲಿನ ಗಾನಯೋಗಿ ಪಂ. ಪಂಚಾಕ್ಷರಿ ಗವಾಯಿ ಪ್ರಶಸ್ತಿಯು ಹಿಂದೂಸ್ತಾನಿ ಗಾಯನಕ್ಕಾಗಿ ಪಂ.ಸೋಮನಾಥ ಮರಡೂರ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು ತಲಾ ₹10 ಲಕ್ಷ ನಗದು, ಸ್ಮರಣಿಕೆ, ಪ್ರಶಸ್ತಿ ಫಲಕ ಹೊಂದಿದೆ.

ಸಾಮಾಜಿಕ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ 2020-21ನೇ ಸಾಲಿನ ಅಕ್ಕಮಹಾದೇವಿ ಪ್ರಶಸ್ತಿಯನ್ನು ಇಲ್ಲಿಯ ಜಗನ್ಮಾತೆ ಅಕ್ಕಮಹಾದೇವಿ ಆಶ್ರಮ ಟ್ರಸ್ಟ್ ಪಡೆದುಕೊಂಡಿದೆ. ಈ ಪ್ರಶಸ್ತಿಯು ತಲಾ ₹ 5 ಲಕ್ಷ ಹಾಗೂ ಸ್ಮರಣಿಕೆ, ಪ್ರಶಸ್ತಿ ‍ಫಲಕ ಒಳಗೊಂಡಿದೆ. ಇನ್ನು, ಸಂಗೀತ, ನೃತ್ಯ ಪ್ರಶಸ್ತಿ ವಿಭಾಗದಲ್ಲಿ 2023-24ನೇ ಸಾಲಿನ ಶ್ರೀ ನಿಜಗುಣ-ಪುರಂದರ ಪ್ರಶಸ್ತಿಯು ಧಾರವಾಡದ ಅಕ್ಕಮಹಾದೇವಿ ಮಠವು ಪಡೆದುಕೊಂಡಿದ್ದು, ಪ್ರಶಸ್ತಿ ₹ 5 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

ಇದರೊಂದಿಗೆ ಈಗಾಗಲೇ ಘೋಷಣೆಯಾಗಿ ಪ್ರಶಸ್ತಿ ಪ್ರದಾನ ಮಾಡದೇ ಇರುವ ಹಲವು ಪ್ರಶಸ್ತಿಗಳಲ್ಲಿ ಧಾರವಾಡದ ಸಾಧಕರು ಇದ್ದಾರೆ. 2021-22ನೇ ಸಾಲಿನ ಬಸವ ರಾಷ್ಟ್ರೀಯ ಪುರಸ್ಕಾರ ಪಡೆದ ಡಾ. ವೀರಣ್ಣ ರಾಜೂರ, 2020-21ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ ಪಡೆದ ಗಾಯತ್ರಿ ದೇಸಾಯಿ ಹಾಗೂ ಶ್ರೀ ನಿಜಗುಣ-ಪುರಂದರ ಪ್ರಶಸ್ತಿಗೆ ಪುರಸ್ಕೃತರಾದ ಪಂ.ವೆಂಕಟೇಶ ಕುಮಾರ ಅವರ ಹೆಸರನ್ನು ಸಹ ಮರು ಘೋಷಣೆ ಮಾಡಿದ್ದು ತಲಾ ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಒಳಗೊಂಡಿದೆ. ಜ. 31ರಂದು ಈ ಎಲ್ಲ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸಿ ಕೋರ್ಟಲ್ಲಿ ಕೇಸ್‌ ವಿಲೇವಾರಿ ಬಾಕಿ : ಕೃಷ್ಣ ಕಿಡಿ
ಬೇಸಿಗೆ ಆರಂಭದಲ್ಲೇ ಕೆರೆಗಳು ಅರ್ಧಖಾಲಿ - 2268 ಕೆರೆಗಳಲ್ಲಿ ಶೇ.50 ನೀರೂ ಇಲ್ಲ