ಬಮ್ಮಿಗಟ್ಟಿ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಭೇಟಿ

KannadaprabhaNewsNetwork |  
Published : Feb 02, 2025, 01:02 AM IST
31ಡಿಡಬ್ಲೂಡಿ9ಸಾರ್ವಜನಿಕರ ದೂರುಗಳ ಹಿನ್ನಲೆಯಲ್ಲಿಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ದೀಡಿರ್ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.

ಧಾರವಾಡ:

ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಸಭೆ ಜರುಗಿಸಿ, ನಿಯಮಾನುಸಾರ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ನಂತರ ಬಮ್ಮಿಗಟ್ಟಿ ಗ್ರಾಮಸ್ಥರ, ಚುನಾಯಿತ ಪ್ರತಿನಿಧಿಗಳ ಹಾಗೂ ಜನಪ್ರತಿನಿಧಿಗಳ ಕುಂದು-ಕೊರತೆ ಸಭೆ ಜರುಗಿಸಿದರು. ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.

ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಮಂಜುನಾಥ ದೂಳಿಕೊಪ್ಪ ಹಾಗೂ ಅಶೋಕ ಕಂದುನವರ, ಜಗದೀಶ ಮೆಣಸಿನಕಾಯಿ, ಶ್ರೀಶೈಲ, ಮಲ್ಲೇಶಪ್ಪ ಅಕ್ಕಿ ಮತ್ತು ಗ್ರಾಮಸ್ಥರು, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು