ಕನ್ನಡಪ್ರಭ ವಾರ್ತೆ ಮಡಿಕೇರಿ
ಅಂದು ಬೆಳಗ್ಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸುವರು. ಅತಿಥಿಗಳಾಗಿ ರಾಜ್ಯ ಸರ್ಕಾರದ ಚೀಫ್ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ರೋಷನ್ ಅಪ್ಪಚ್ಚು, ಅರಣ್ಯ ಮಹಾವಿದ್ಯಾಲಯದ ನಿವೖತ್ತ ಡೀನ್ ಸಿ.ಜಿ. ಕುಶಾಲಪ್ಪ, ಮಾಜಿ ಸಚಿವರಾದ ಎಂ. ಪಿ ಅಪ್ಪಚ್ಚು ರಂಜನ್, ಬಿ.ಎ..ಜೀವಿಜಯ, ಪಾಂಡಿಚೇರಿ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಆರ್. ಬಾಬು, ಸಂಸ್ಥೆಯ ಮಹಾಪೋಷಕ ಗೌತಮ್ ಬಸಪ್ಪ, ಎಂ.ಜಿ ಬೋಪಣ್ಣ, ಕಾರ್ಯದರ್ಶಿ ಎಂ.ಬಿ. ಬೋಪಣ್ಣ, ರೋಟರಿ ಸಂಸ್ಥೆಯ ನಿಕಟ ಪೂರ್ವ ಗವರ್ನರ್ ಎಚ್.ಆರ್.ಕೇಶವ, ಜಿ.ಪಂ. ನಿವೃತ್ತ ಮುಖ್ಯ ಲೆಕ್ಕಾಧಿಕಾರಿ ಬಿ.ಬಿ. ಪುಪ್ಪಾವತಿ, ಸಂಸ್ಥೆಯ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕೆ.ಯು. ರೀಟಾ ಪಾಲ್ಗೊಳ್ಳಲಿದ್ದಾರೆ.
ಇದೇ ಸಂದರ್ಭ, ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಭೋಜನಶಾಲೆ ಉದ್ಘಾಟನೆ ಮತ್ತು ಸ್ಮರಣ ಸಂಚಿಕೆ ಲೋಕಾರ್ಪಣೆ ನಡೆಯಲಿದೆ.ಸ್ನೇಹ ಮಿಲನ:
ಅಂದು ಸಂಜೆ 5 ಗಂಟೆಯಿಂದ 7 ಗಂಟೆ ವರೆಗೆ ಹೆಸರಾಂತ ‘ಸರಿಗಮಪ’ ಕಲಾವಿದರಾದ ಮಹೇಂದ್ರ, ಪ್ರಿಯಾ ಕುಂದಾಪುರ, ಶಶಿಕುಮಾರ್, ಸಿಂಚನ ಅವರಿಂದ ಗಾನ ವೈಭವ ಮತ್ತು ಬೆಂಗಳೂರಿನ ಕಲಾವಿದರಿಂದ ನೃತ್ಯ ಕಾರ್ಯಕ್ರಮ ಆಯೋಜಿತವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕ. ಬಿ.ಜಿ.ವಿ. ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಸ್ಥೆಯ ಇತಿಹಾಸ:ದಾನಿ ದಿ. ಲೆ.ಕ. ಡಿ ಸಿ ಬಸಪ್ಪ ಪ್ರಯತ್ನದಿಂದಾಗಿ ಅವರ ತಾಯಿ ಡಿ ಚೆನ್ನಮ್ಮ ಸ್ಮರಣಾರ್ಥ 1960 ರ ಜು.22 ರಂದು ಆರಂಭವಾದ ಪ್ರೌಢಶಾಲೆ 6 ದಶಕಗಳಲ್ಲಿ ಈ ವ್ಯಾಪ್ತಿಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ.
ದಿವಂಗತರಾದ ಮಚ್ಚಂಡ ಗಣಪತಿ, ಪುಟ್ಟುಸ್ವಾಮಿ ಮುತ್ತಯ್ಯ ಗುಂಡುಕುಟ್ಟಿ ಮಂಜುನಾಥಯ್ಯ, ಎಂ ಎ ಪೊನ್ನಪ್ಪ, ಕೆ.ಡಿ.ಸೋಮಯ್ಯ, ಸಿ.ಎ.ಪೂವಯ್ಯ, ಎಂ ಜಿ ಬೋಪಣ್ಣ ಸೇರಿದಂತೆ ಅನೇಕ ಮಹನೀಯರ ಪರಿಶ್ರಮದಿಂದಾಗಿ ಶಿಕ್ಷಣ ಸಂಸ್ಥೆಯು ಸಾಕಷ್ಟು ಅಭಿವೖದ್ದಿ ಹೊಂದಿದೆ.1964ರಲ್ಲಿ ಗರಗಂದೂರಿನ ಈಗಿನ ಸುಂದರ ಕಟ್ಟಡಕ್ಕೆ ಶಾಲೆಯನ್ನು ಸ್ಥಳಾಂತರಿಸಲಾಯಿತು. 1967ರಲ್ಲಿ ದಿ. ಗುಂಡೂರಾವ್ ಕಾಲದಲ್ಲಿ ಕಾಲೇಜು ಸ್ಥಾಪನೆಯ ಕನಸು ಈಡೇರಿತು.
ಪ್ರೌಢಶಾಲೆಯ ಪ್ರಥಮ ಮುಖ್ಯೋಪಾಧ್ಯಾಯರಾಗಿ ಕೊಡಗಿನ ಇತಿಹಾಸದ ಕೃತಿಕಾರ, ಖ್ಯಾತ ಸಾಹಿತಿ ದಿ. ಡಿ.ಎನ್. ಕೖಷ್ಣಯ್ಯ ಕಾರ್ಯನಿರ್ವಹಿಸಿದ್ದು ಸಂಸ್ಥೆಯ ಪಾಲಿಗೆ ಹೆಮ್ಮೆಯ ವಿಚಾರ ಎಂದೂ ಕುಮಾರ್ ಸ್ಮರಿಸಿದರು.