- ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ನೂತನ ಕಚೇರಿ ಉದ್ಘಾಟನೆ
ಕನ್ನಡಪ್ರಭ ವಾರ್ತೆ ದಾವಣಗೆರೆ ರಾಷ್ಟ್ರಮಟ್ಟದಲ್ಲಿ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ ಹೆಮ್ಮರವಾಗಿ ಬೆಳೆದಿದೆ. ರಾಜ್ಯ ಸರ್ಕಾರಗಳು ಅನೇಕ ಕೈಗಾರಿಕಾ ಪ್ರದೇಶಗಳಲ್ಲಿ ಸೈಟ್ ಮಾಡುತ್ತಿದೆ. ಸಬ್ಸಿಡಿ 75% ಕೊಡುತ್ತಿದ್ದು, ಅದರ ಉಪಯೋಗ ಪಡೆಯಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.
ನಗರದ ನಿಟ್ಟುವಳ್ಳಿಯಲ್ಲಿ ಶನಿವಾರ ದಲಿತ ಕೈಗಾರಿಕೋದ್ಯಮಿಗಳ ವಾಣಿಜ್ಯ ಮಂಡಳಿ (ಡಿಐಸಿಸಿಐ) ಜಿಲ್ಲಾ ಪ್ರಧಾನ ಕಚೇರಿ ಉದ್ಘಾಟಿಸಿ, ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎಸ್ಸಿ- ಎಸ್ಟಿ ಹಣವನ್ನು ದಲಿತ ಅಭಿವೃದ್ಧಿ ನಿಗಮಗಳ ಮೂಲಕ ಹಂಚಿಕೆ ಆಗಬೇಕೆಂಬ ಬೇಡಿಕೆ ಮುಖ್ಯಮಂತ್ರಿ ಅವರಿಗೆ ಮಾಡಲಾಗಿದೆ. ದಲಿತರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಉತ್ತಮ ಕೈಗಾರಿಕಾ ಪ್ರದೇಶದಲ್ಲಿ ದಲಿತರಿಗೆ ಕೈಗಾರಿಕಾ ಸೈಟ್ ನೀಡಲು ಚರ್ಚೆ ನಡೆಸಲಾಗಿದೆ. ಹಣಕಾಸಿನ ತೊಂದರೆಯಿಂದ ಬಳಲುವ ದಲಿತ ಉದ್ಯಮಿಗಳಿಗೆ ಬಡ್ಡಿ ರಿಯಾಯಿತಿಗೆ ಒತ್ತಾಯಿಸಲಾಗಿದೆ. ಕೈಗಾರಿಕಾ ಉದ್ದೇಶಕ್ಕೆ ದಲಿತರ ಫಲವತ್ತಾದ ಭೂಮಿ ಕೈಗಾರಿಕೆಗೆ ವಶಪಡಿಸಿಕೊಳ್ಳಲು ನೀವು ತಡೆ ಹಾಕಬೇಕು. ಆ ನಿಟ್ಟಿನಲ್ಲಿ ಡಿಐಸಿಸಿಐ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯಡಾ.ಎಂ.ಮಂಜಣ್ಣ, ಪತ್ರಕರ್ತ ಬಸವರಾಜು ದೊಡ್ಡಮನಿ, ಡಿಐಸಿಸಿಐ ಬುಡಕಟ್ಟು ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ.ರಾಜಾನಾಯಕ, ಕರ್ನಾಟಕ ಬ್ಯಾಂಕ್ ಶಾಖಾ ವ್ಯವಸ್ಥಾಪಕ ರಾಕೇಶ್ ಶಾನುಭೋಗ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಂಜುನಾಥ ಕುಂದುವಾಡ, ಮಹಾಂತೇಶ, ಡಿಐಸಿಸಿಐ ಜಿಲ್ಲಾಧ್ಯಕ್ಷ ಮಂಜುನಾಥ್ ವೈ.ಕಬ್ಬೂರು, ಜಿಲ್ಲಾ ಉಪಾಧ್ಯಕ್ಷ ಸುರೇಶ ಬಿ. ಗೋಶಾಲೆ ಇನ್ನಿತರ ಸದಸ್ಯರು ಹಾಜರಿದ್ದರು.
-19ಕೆಡಿವಿಜಿ36.ಜೆಪಿಜಿ: