ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಮನ್ಮುಲ್ ಉಪವ್ಯವಸ್ಥಾಪಕರ ಕಚೇರಿಯಲ್ಲಿ ರಾಸು ವಿಮೆ ಯೋಜನೆ ಹಣದ ಚೆಕ್ ಅನ್ನು ಫಲಾನುಭವಿಗೆ ವಿತರಿಸಿ, ಬಳಿಕ ನಿವೃತ್ತಿಗೊಂಡ ಕಾರ್ಯದರ್ಶಿಗಳನ್ನು ಅಭಿನಂದಿಸಿ ಮಾತನಾಡಿದರು.
ರೈತ ಫಲಾನುಭವಿಗಳಿಗೆ ನೀಡುವ ರಾಸು ವಿಮೆ, ರೈತ ಕಲ್ಯಾಣ ಟ್ರಸ್ಟ್, ಹಾಲು ಕರೆಯುವ ಯಂತ್ರದ ಸಬ್ಸಡಿ ಸೇರಿದಂತೆ ಅನೇಕ ಸೌಲಭ್ಯಗಳ ಹಣದ ವ್ಯವಹಾರವನ್ನು ಚೆಕ್ ಮೂಲಕ ವಿತರಣೆ ಮಾಡಲಾಗುತ್ತಿತ್ತು. ಇದರಲ್ಲಿ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಇನ್ನೂ ಮುಂದೆ ಹಣದ ಎಲ್ಲಾ ವ್ಯವಹಾರ ಡಿಜಿಟಲ್ ಮೂಲಕ ಮಾಡಲು ಆಡಳಿತ ಮಂಡಳಿಯಲ್ಲಿ ತೀರ್ಮಾನಿಸಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.ನಾನು ನಿರ್ದೇಶಕನಾಗಿ ಆಯ್ಕೆಯಾದ ಬಳಿಕ ಇಲ್ಲಿಯವರೆಗೆ ಒಕ್ಕೂಟದ ಹಲವು ಯೋಜನೆಗಳಿಂದ ಸುಮಾರು 4 ಕೋಟಿಯಷ್ಟು ಹಣದ ಚೆಕ್ ಗಳನ್ನು ರೈತಫಲಾನುಭವಿಗಳಿಗೆ ವಿತರಿಸಿದ್ದೇನೆ. ಒಕ್ಕೂಟಗಳಿಂದ ದೊರೆಯುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ಡೇರಿಗಳಿಗೆ ಕೊಡಿಸುವ ಕೆಲಸ ಮಾಡುತ್ತೇನೆ ಎಂದರು.
ನಿವೃತ್ತಿ ಹೊಂದಿದ ಕೆರೆತೊಣ್ಣೂರು ಡೇರಿ ಕಾರ್ಯದರ್ಶಿ ಸಿದ್ದಲಿಂಗೇಗೌಡ, ಹಿರೇಮರಳಿ ಡೇರಿ ಕಾರ್ಯದರ್ಶಿ ಜಗದೀಶ್ ಹಾಗೂ ನುಗ್ಗಹಳ್ಳಿ ಡೇರಿ ಕಾರ್ಯದರ್ಶಿ ಸಿದ್ದರಾಮೇಗೌಡ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಜಿಲ್ಲಾ ಸಹಕಾರಿ ಯೂನಿಯನ್ಗೆ ನಿರ್ದೇಶಕರಾಗಿ ಆಯ್ಕೆಯಾದ ಸಿ.ಶಿವಕುಮಾರ್ ಅವರನ್ನು ಎಲ್ಲಾ ಕಾರ್ಯದರ್ಶಿಗಳು, ಸಿಬ್ಬಂದಿ ಅಭಿನಂದಿಸಿದರು.