ಗಣ್ಯರಿಂದ ಮಾಜಿ ಸಚಿವ ಬಿ.ಸಿ. ನಾಗೇಶ್‌ ಅಂತಿಮ ದರ್ಶನ

KannadaprabhaNewsNetwork |  
Published : Aug 20, 2026, 01:15 AM IST
್ಿ್ಿ್ಿ್ಿ | Kannada Prabha

ಸಾರಾಂಶ

ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿಯವರು, ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕರಾದ ಮಸಾಲ ಜಯರಾಮ್, ಡಾ.ಎಸ್. ರಫೀಕ್‌ಅಹ್ಮದ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಚಂದ್ರಶೇಖರ್ ಮೊದಲಾದವರು ಅಗಲಿದ ನಾಯಕ ಬಿ.ಸಿ. ನಾಗೇಶ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಮಂಗಳವಾರ ನಿಧನರಾದ ಮಾಜಿ ಸಚಿವ ಬಿ.ಸಿ. ನಾಗೇಶ್‌ ಅವರ ಪಾರ್ಥಿವ ಶರೀರ ಬುಧವಾರ ನಗರಕ್ಕೆ ಆಗಮಿಸಿದಾಗ ವಿವಿಧ ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು ಅಂತಿಮ ದರ್ಶನ ಮಾಡಿ ನಮನ ಸಲ್ಲಿಸಿದರು.

ಬಿ.ಸಿ.ನಾಗೇಶ್‌ ಅವರು ಮಂಗಳವಾರ ಬೆಂಗಳೂರಿನ ತಮ್ಮ ಪುತ್ರಿ ನಿವಾಸದಲ್ಲಿ ನಿಧನರಾದರು. ಸ್ವಕ್ಷೇತ್ರ ತಿಪಟೂರಿಗೆ ತೆರಳುವ ಮಾರ್ಗ ಮಧ್ಯೆ ನಗರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.

ರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ವೀರೇಶಾನಂದ ಸರಸ್ವತಿಯವರು, ಶಾಸಕ ಜಿ.ಬಿ. ಜ್ಯೋತಿಗಣೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕರಾದ ಮಸಾಲ ಜಯರಾಮ್, ಡಾ.ಎಸ್. ರಫೀಕ್‌ಅಹ್ಮದ್, ವಿಧಾನ ಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಜಿಲ್ಲಾ ಬ್ರಾಹ್ಮಣ ಸಭಾ ಅಧ್ಯಕ್ಷ ಚಂದ್ರಶೇಖರ್ ಮೊದಲಾದವರು ಅಗಲಿದ ನಾಯಕ ಬಿ.ಸಿ. ನಾಗೇಶ್‌ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚವಿಟ್ಟು ಅಂತಿಮ ನಮನ ಸಲ್ಲಿಸಿದರು.

ಇದಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರು, ಸಾರ್ವಜನಿಕ ಸಂಸ್ಥೆಯ ಗಣ್ಯರು ಆಗಮಿಸಿ ಬಿ.ಸಿ.ನಾಗೇಶ್‌ ಅವರಿಗೆ ಅಂತಿಮ ವಿದಾಯ ಹೇಳಿದರು. ಟಿಎಂಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ.ಎನ್.ಎಸ್. ಜಯಕುಮಾರ್, ತುಮಕೂರು ಹೋಟೆಲ್ ಮತ್ತು ಉಪಾಹಾರ ಮಂದಿರಗಳ ಸಂಘದ ಅಧ್ಯಕ್ಷ ವಾಸುದೇವ ಶೆಟ್ಟಿ, ಉಪಾಧ್ಯಕ್ಷ ಟಿ.ಜಿ. ವೇದಮೂರ್ತಿ, ವಿದ್ಯಾವಾಹಿನಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎನ್,ಬಿ. ಪ್ರದೀಪ್‌ಕುಮಾರ್, ಮಾಧವ ಮಹಾ ಮಂಡಲ ಅಧ್ಯಕ್ಷ ಜಿ.ಕೆ. ಶ್ರೀನಿವಾಸ್, ಕೃಷ್ಣಮಂದಿರ ಸಮಿತಿ ಅಧ್ಯಕ್ಷ ನಾಗರಾಜ್‌ ಧನ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ವಕ್ತಾರ ಎಚ್.ಎನ್. ಚಂದ್ರಶೇಖರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಟಿ.ಎಚ್. ಹನುಮಂತರಾಜು, ಬಿಜೆಪಿ ಮುಖಂಡರಾದ ವೈ.ಎಚ್. ಹುಚ್ಚಯ್ಯ, ಶಿವಪ್ರಸಾದ್, ಎಚ್.ಎಂ. ರವೀಶಯ್ಯ, ಸತ್ಯಮಂಗಲ ಜಗದೀಶ್, ರುದ್ರೇಶ್,ಧನುಷ್, ಎಂ.ಬಿ, ನಂದೀಶ್, ಸಾಗರನಹಳ್ಳಿ ವಿಜಯಕುಮಾರ್, ಚೈತ್ರ ಮಂಜುನಾಥ್, ವೇದಮೂರ್ತಿ, ನವಚೇತನ್, ಭೃರಣ್ಣ, ಓಂಕಾರ್, ಟಿ.ಎಸ್. ನಿರಂಜನ್, ಬೋರೇಗೌಡ, ಕೃಷ್ಣಮೂರ್ತಿ ಮೊದಲಾದವರು ಆಗಮಿಸಿ ಬಿ.ಸಿ. ನಾಗೇಶ್‌ಅವರ ಅಂತಿಮ ದರ್ಶನ ಮಾಡಿ ಗೌರವ ನಮನ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಚಾರ ನಿಯಮ ಭಂಜಕರಿಗೆ ಕಾದಿದೆ ಭಾರಿ ದಂಡ!
ಫಾರ್ಮರ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ರೋಗಿಗಳಿಗೆ ವರದಾನ: ನಂಜಾವಧೂತ ಶ್ರೀ