ಭವಿಷ್ಯ ಉಜ್ವಲಕ್ಕೆ ಕಲಿಕೆಯಲ್ಲಿ ಶ್ರದ್ಧೆ, ಭಕ್ತಿ ಮುಖ್ಯ: ಮಾರುತಿ ಕಾಮತ್‌

KannadaprabhaNewsNetwork |  
Published : Jan 04, 2024, 01:45 AM IST
2ಸಿಕೆಡಿ2 | Kannada Prabha

ಸಾರಾಂಶ

ಪಟ್ಟಣದ ಸಿ.ಎಲ್.ಇ ಸಂಸ್ಥೆಯ ಕೆ.ಕೆ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮಿಲನ ಕಾರ್ಯಕ್ರಮಕ್ಕೆ ಮಾರುತಿ ಎಸ್. ಕಾಮತ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ವಿದ್ಯಾರ್ಥಿಗಳು ಶ್ರದ್ಧಾ, ಭಕ್ತಿಯಿಂದ ಶಿಕ್ಷಣವನ್ನು ಕಲಿತಾಗ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಿಬಿಎಸ್‌ಇ ತರಬೇತಿ ವಿಭಾಗದ ಸಂಪನ್ಮೂಲ ವ್ಯಕ್ತಿ ಮಾರುತಿ ಎಸ್. ಕಾಮತ್ ಹೇಳಿದರು.

ಪಟ್ಟಣದ ಸಿ.ಎಲ್.ಇ ಸಂಸ್ಥೆಯ ಕೆ.ಕೆ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳುಳ್ಳ ಶಿಕ್ಷಣವನ್ನು ಕಲಿಸಿದಾಗ ಮಾತ್ರ ಆತ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.

ಎನ್.ಎಸ್.ವಂಟಮುತ್ತೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲೆಯ ವಾತಾವರಣ ಹಾಗೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಸಾಗರ ಐ.ಬಿಸ್ಕೋಪ್ ಬಹುಮಾನ ವಿತರಿಸಿದರು. ಶಾಲೆಯ ಪ್ರಾಚಾರ್ಯ ಸ್ಮೀತಾ ಎನ್.ಶಿಂಧೆ ಶಾಲೆಯ ವರದಿ ಮಂಡಿಸಿದರು. ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅದ್ಧೂರಿಯಾಗಿ ಜರುಗಿದವು. ಸಿಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಎಲ್ಲ ಅಂಗಸಂಸ್ಥೆಯ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಪಾಲಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ