ವಿಕಲಚೇತನರಿಗೆ ವಿಕಲಾಂಗತೆ ದೌರ್ಬಲ್ಯವಲ್ಲ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

KannadaprabhaNewsNetwork |  
Published : Dec 04, 2025, 02:30 AM IST
3ಎಚ್‌ಪಿಟಿ3- ಹೊಸಪೇಟೆಯ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮತ್ತಿತರರಿದ್ದರು. | Kannada Prabha

ಸಾರಾಂಶ

ವಿಕಲಾಂಗರು ದೈಹಿಕವಾಗಿ ನ್ಯೂನತೆಗಳನ್ನು ಹೊಂದಿರಬಹುದು.

ಹೊಸಪೇಟೆ: ವಿಕಲಚೇತನರಿಗೆ ವಿಕಲಾಂಗತೆ ದೌರ್ಬಲ್ಯವಲ್ಲ. ದೈಹಿಕ ನ್ಯೂನತೆಯ ಜೊತೆಗೆ ವಿಶೇಷ ಸಾಮರ್ಥ್ಯ ಶಕ್ತಿಯನ್ನು ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ಕ್ರೀಡಾ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಘಸಂಸ್ಥೆಗಳ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಬುಧವಾರ ಮಾತನಾಡಿದರು.

ವಿಕಲಾಂಗರು ದೈಹಿಕವಾಗಿ ನ್ಯೂನತೆಗಳನ್ನು ಹೊಂದಿರಬಹುದು. ಆದರೆ ನಾಗರಿಕ ಸಮಾಜದಲ್ಲಿ ಸಾಮಾನ್ಯ ವ್ಯಕ್ತಿಗಳು ಕೊಳಕು ಮನಸ್ಥಿತಿಯಿಂದ ಮಾನಸಿಕ ವಿಕಲಾಂಗತೆ ಹೆಚ್ಚಿಸಿಕೊಂಡಿದ್ದಾರೆ. ಅಂತಹ ಹೀನ ವ್ಯಕ್ತಿಗಳಿಗೆ ನಿಜವಾದ ವಿಕಲಚೇತನರು ಎನ್ನಬಹುದು. ಸಾಮಾಜಿಕ ಪ್ರಗತಿಯನ್ನು ಸಾಧಿಸಲು ವಿಕಲಚೇತರನ್ನು ಒಳಗೊಂಡು ಸಮಾಜಗಳನ್ನು ರೂಪಿಸುವುದು 2025ರ ವಿಶ್ವಸಂಸ್ಥೆಯ ಘೋಷವಾಕ್ಯವಾಗಿದೆ. ವಿಶೇಷಚೇತನರಿಗೂ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ. ಅವರನ್ನು ಪ್ರತ್ಯೇಕ ಎಂದು ಭಾವಿಸದೇ ಅವರನ್ನು ಒಳಗೊಂಡಂತೆ ಸಮಾಜದ ಪ್ರಗತಿಯಾಗಲಿ ಎಂಬುದು ವಿಶ್ವಸಂಸ್ಥೆ ಉದ್ದೇಶವಾಗಿದೆ. ವಿಶೇಷ ಚೇತನರು ಯಾವುದಾದರೂ ಒಂದು ವಿಷಯದಲ್ಲಿ ವಿಶೇಷ ಕೌಶಲ್ಯವನ್ನು ಹೊಂದಿರುತ್ತಾರೆ. ಅದನ್ನು ಅವರು ಗುರುತಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಸಾಧನೆಗೆ ಮುಂದಾಗಬೇಕು. ದೃಢವಾದ ಮನಸ್ಸು ಮತ್ತು ಛಲವಿದ್ದರೆ ಯಾವ ವ್ಯಕ್ತಿಯಾದರೂ ಸಾಧನೆ ಮಾಡಬಹುದು. ಸರ್ಕಾರದಿಂದ ವಿಕಲಚೇತನರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ವಿಕಲಚೇತನರ ಹಕ್ಕುಗಳು, ಘನತೆ ಮತ್ತು ಯೋಗಕ್ಷೇಮದ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಇದೇ ವೇಳೆ ವಿಶ್ವ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ನಗರಸಭೆ ಅಧ್ಯಕ್ಷ ಎನ್.ರೂಪೇಶಕುಮಾರ್, ಜಿಪಂ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಮಾಂಜಿನೇಯ, ಎಂಆರ್‌ಡಬ್ಲೂ, ಯುಆರ್‌ಡಬ್ಲೂ, ವಿಆರ್‌ಡಬ್ಲೂ ತಾಲೂಕು ಕಾರ್ಯಕರ್ತರು, ವಿಕಲಚೇತನರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ವಿಶೇಷ ಚೇತನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾಪ್ರತಿಭಟನೆ
ಜನಾಭಿಪ್ರಾಯದಡಿ ಪ್ರಜಾಸೌಧ ನಿರ್ಮಾಣ: ಎಸಿ ಶ್ವೇತಾ ಬೀಡಿಕರ