ವಿಕಲಚೇತನರಿಗೂ ರಾಜ್ಯ ಮಟ್ಟದ ಕ್ರೀಡಾಕೂಟ ಅಗತ್ಯ

KannadaprabhaNewsNetwork |  
Published : Jan 21, 2026, 02:45 AM IST
20ಕೆಪಿಎಲ್‌ 01ವಿಕಲಚೇತನ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕಾರ್ಯಕ್ರಮವನ್ನು ಉದ್ದೇಶಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಮಾತನಾಡಿದರು. | Kannada Prabha

ಸಾರಾಂಶ

ಕಲಚೇತನ ನೌಕರರಿಗಾಗಿ ಪ್ರತಿಯೊಂದು ಜಿಲ್ಲೆಗೆ ಹಾಗೂ ರಾಜ್ಯ ಹಂತದಲ್ಲಿ ಕ್ರೀಡಾಕೂಟ ಆಯೋಜನೆ ಅಗತ್ಯ

ಕೊಪ್ಪಳ: ವಿಕಲಚೇತನ ನೌಕರರಿಗೆ ಅವರ ಅಂಗವೈಕಲ್ಯತೆಗೆ ಅನುಗುಣವಾಗಿ ಸರ್ಕಾರಿ ನೌಕರರ ಕ್ರೀಡಾಕೂಟದ ಜತೆ ರಾಜ್ಯ ಮಟ್ಟದ ವಿಕಲಚೇತನ ನೌಕರರ ಕ್ರೀಡಾಕೂಟದ ಆಯೋಜನೆಯ ಅಗತ್ಯವಿದೆ ಎಂದು ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ನಾಗರಾಜ ಆರ್.ಜುಮ್ಮನ್ನವರ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ವಿಕಲಚೇತನ ನೌಕರರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ವಿಕಲಚೇತನ ನೌಕರರಲ್ಲಿ ಕೂಡಾ ಅನೇಕ ರೀತಿಯ ವಿಶಿಷ್ಟ ಹಾಗೂ ವಿಭಿನ್ನವಾದ ಪ್ರತಿಭೆಗಳಿದ್ದು ಅವುಗಳನ್ನು ಗುರುತಿಸಬೇಕಾದರೆ ವೇದಿಕೆಗಳ ಅಗತ್ಯ ಇರುವುದನ್ನು ಮನಗಂಡು ಕಳೆದ 5 ವರ್ಷಗಳಿಂದ ಸರ್ಕಾರಿ ನೌಕರರ ಕ್ರೀಡಾಕೂಟ ಜತೆ ವಿಕಲಚೇತನ ನೌಕರರಿಗೂ ಕೂಡಾ ಅವರ ಅಂಗವೈಕಲ್ಯತೆಗೆ ಅನುಗುಣವಾದ ರೀತಿಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತದೆ. ಆದರೆ ಇದು ಕೇವಲ ಜಿಲ್ಲೆಗೆ ಮಾತ್ರ ಸಿಮಿತವಾಗುತ್ತದೆ. ಇವರ ಪ್ರತಿಭೆ ರಾಜ್ಯ ಮಟ್ಟದಲ್ಲಿ ನೋಡಬೇಕಾದರೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರಿಗಾಗಿ ಪ್ರತಿಯೊಂದು ಜಿಲ್ಲೆಗೆ ಹಾಗೂ ರಾಜ್ಯ ಹಂತದಲ್ಲಿ ಕ್ರೀಡಾಕೂಟ ಆಯೋಜನೆ ಅಗತ್ಯವಿದ್ದು, ವಿಕಲಚೇತನ ನೌಕರರ ಸಂಘದಿಂದ ಈಗಾಗಲೇ ಅನೇಕ ಬಾರಿಯಲ್ಲಿ ಮನವಿ ಮಾಡಿದ್ದಾರೆ. ಮುಂದಿನ ದಿನಮಾನಗಳಲ್ಲಿ ರಾಜ್ಯ ಸಂಘದ ಸಭೆಯಲ್ಲಿ ವಿಷಯ ಚರ್ಚೆ ಮಾಡುವ ಮೂಲಕ ರಾಜ್ಯ ಮಟ್ಟದ ಕ್ರೀಡಾಕೂಟದ ಆಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ, ವಿಕಲಚೇತನ ನೌಕರರೂ ಕೂಡಾ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕು ಎಂಬ ಹಂಬಲ ಹೊಂದಿದ್ದಾರೆ. ಆದರೆ ಸಾಮಾನ್ಯ ನೌಕರರ ಜತೆಯಲ್ಲಿ ವಿಕಲಚೇತನ ನೌಕರರು ಸ್ಪರ್ಧೆಒಡ್ಡುವುದು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಕಲಚೇತನ ನೌಕರರ ಸಂಘದಿಂದ ರಾಜ್ಯದಲ್ಲಿ ಪ್ರಥಮ ಬಾರಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿತ್ತು. ಇದನ್ನು ಮನಗಂಡು ಸರ್ಕಾರಿ ನೌಕರರ ಸಂಘದಿಂದ ನಮ್ಮ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟ ನಡೆಸಲಾಗುತ್ತದೆ. ಇದರಿಂದ ಉಳಿದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರು ಕ್ರೀಡಾಕೂಟದಿಂದ ವಂಚಿತರಾಗುತ್ತಿದ್ದು, ಅಲ್ಲದೇ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟ ಆಯೋಜನೆ ಮಾಡುತ್ತಿರುವುದರಿಂದ ಪ್ರತಿಭೆಗಳು ಆ ಜಿಲ್ಲೆಗೆ ಮಾತ್ರ ಸಿಮಿತವಾಗುತ್ತವೆ. ರಾಜ್ಯ ಮಟ್ಟದಲ್ಲಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಲಿ ಎಂದರು.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮಹ್ಮದ್ ಆಸೀಫ್ ಅಲಿ, ಖಜಾಂಚಿ ಜಯತೀರ್ಥ ದೇಸಾಯಿ, ಗೌರವಾಧ್ಯಕ್ಷ ಸಿದ್ದಪ್ಪ ಮೇಳಿ, ಕನಕಗಿರಿ ತಾಲೂಕಾಧ್ಯಕ್ಷೆ ಶಂಶಾದಬೇಗಂ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ, ಎನ್.ಪಿ.ಎಸ್. ಸಂಘದ ಜಿಲ್ಲಾಧ್ಯಕ್ಷ ಗೋಪಾಲ ದುಬೆ, ವಿಕಲಚೇತನ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಮಾರನಬಸರಿ, ತಾಲೂಕಾಧ್ಯಕ್ಷ ಅಂದಪ್ಪ ಇದ್ಲಿ, ಯಲಬುರ್ಗಾ ತಾಲೂಕಾಧ್ಯಕ್ಷ ಮಹೇಶ ಆರೇರ ಸೇರಿದಿಂತೆ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೋಲ್ಡನ್‌ ಅವರ್‌ನಲ್ಲಿ 2.16 ಕೋಟಿ ರು, ರಕ್ಷಣೆ
ಇಂದಿನಿಂದ ಲಂಡನ್‌ ಮಾದರಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರ