ರಾಣಿಬೆನ್ನೂರು: ಅಂಗ ವೈಕಲ್ಯವನ್ನು ಶಾಪವೆಂದು ಪರಿಗಣಿಸದೇ ಅದನ್ನು ಸವಾಲಾಗಿ ಸ್ವೀಕರಿಸಿ ಸಾಮಾನ್ಯರಂತೆ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ ಹೇಳಿದರು.
ಯುನಿಸೆಮ್ ಅಗ್ರಿಟೆಕ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎನ್. ದೇವಕುಮಾರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಸ್ನೇಹದೀಪ ಸಂಸ್ಥೆಯ ಧರ್ಮದರ್ಶಿಗಳಾದ ಕೆ.ಜಿ. ಮೋಹನ್, ಡಾ. ಪಾಲ್ ಮುದ್ದಾ ಅಧ್ಯಕ್ಷತೆ ವಹಿಸಿದ್ದರು.ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.70ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಬಹುಮಾನ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ, ಕ್ಷೇತ್ರ ಸಮನ್ವಯಾಧಿಕಾರಿ ಮಂಜು ನಾಯಕ, ವರ್ತಕ ಜಿ.ಜಿ. ಹೊಟ್ಟೇಗೌಡ್ರ, ವಸಂತಾ ಹುಲ್ಲತ್ತಿ, ಸುಮಾ ಉಪ್ಪಿನ ಮತ್ತಿತರರಿದ್ದರು.