ಶಿಷ್ಯರಿಂದ ಗುರುವಿನ ವಿಚಾರಧಾರೆಗೆ ಬೆಳಕು: ಇಮ್ಮಡಿ ಸಿದ್ಧರಾಮ ಶ್ರೀ

KannadaprabhaNewsNetwork |  
Published : Aug 09, 2026, 01:30 AM IST
ಪಟ್ಟಣದ ಸಮೀಪದ ಒಂಟಿಕಲ್ಲು ಮಠದ ಆವರಣದಲ್ಲಿ ನಡೆಯುತ್ತಿರುವ ಸ್ಮರಣೋತ್ಸವದಲ್ಲಿ ಇಮ್ಮಡಿ ಸಿದ್ಧರಾಮ ಸ್ವಾಮೀಜಿ ಆಶೀರ್ವಚನ ನೀಡಿದರು. | Kannada Prabha

ಸಾರಾಂಶ

ಶಿಷ್ಯರ ಮೂಲಕ ಗುರುವಿನ ವಿಚಾರಧಾರೆಗಳು ಬೆಳಕಿಗೆ ಬರುತ್ತವೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮ ಮಹಾಸ್ವಾಮಿಗಳು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಳಲ್ಕೆರೆ

ಶಿಷ್ಯರ ಮೂಲಕ ಗುರುವಿನ ವಿಚಾರಧಾರೆಗಳು ಬೆಳಕಿಗೆ ಬರುತ್ತವೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮ ಮಹಾಸ್ವಾಮಿಗಳು ತಿಳಿಸಿದರು.

ಹೊಳಲ್ಕೆರೆಯ ಒಂಟಿಕಂಬದ ಶ್ರೀ ಮುರುಘಾಮಠದ ಆವರಣದಲ್ಲಿ ಲಿಂಗೈಕ್ಯ ಜಗದ್ಗುರು ಮಲ್ಲಿಕಾರ್ಜುನ ಮಹಾಸ್ವಾಮಿಗಳ ೩೨ನೆಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಭಾಗಿಯಾಗಿ ಆಶೀರ್ವಚನ ನೀಡಿದರು.

ಇಡೀ ಜಗತ್ತಿನಲ್ಲಿ ರಾಮಕೃಷ್ಣ ಮಿಷನ್ ಶಾಖೆಗಳಿವೆ. ಜಗತ್ತಿನ ಪ್ರತಿ ಮೂಲೆಯಲ್ಲೂ ಇವೆ. ರಾಮಕೃಷ್ಣ ಪರಮಹಂಸರು ತಮ್ಮ ಕೊಲ್ಕತ್ತಾದ ಆಶ್ರಮ ಬಿಟ್ಟರೆ ಎಲ್ಲೂ ಹೋಗಿಲ್ಲ. ಆದರೆ ಅವರ ಹೆಸರು ಜಗತ್ತಿನ ಮೂಲೆ ಮೂಲೆಗೂ ಪಸರಿಸುವಂತೆ ಮಾಡಿದ್ದು ವಿವೇಕಾನಂದರಂತಹ ಉತ್ತಮ ಶಿಷ್ಯರಿಂದ ಮಾತ್ರ ಸಾಧ್ಯವಾಯಿತು ಎಂದರು.

ಎಸ್‌ಜೆಎಂ ವಿದ್ಯಾಪೀಠದ ಡಾ.ಬಸವಕುಮಾರ ಸ್ವಾಮಿಗಳು ಮಾತನಾಡಿ, ಶ್ವಾಸವಿರುವ ತನಕ ವಿಶ್ವಾಸ ಬಿಡಬೇಡ ಎಂಬುದನ್ನು ಅಳವಡಿಸಿಕೊಂಡು ಬದುಕಿದವರು ಮಲ್ಲಿಕಾರ್ಜುನ ಸ್ವಾಮಿಗಳು. ಅವರು ಮಾತನಾಡುವಾಗ ಅವರ ಪ್ರತಿ ಮಾತು ಭಾಷಣದ ರೀತಿ ಇರುತ್ತಿತ್ತು. ಶ್ರೀಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರೆ ಸಭೆ ಗಾಂಭೀರ್ಯದಿಂದ ಕೂಡಿರುತ್ತಿತ್ತು. ಜಯದೇವ ಶ್ರೀ ಅನ್ನದಾಸೋಹ ಹಾಗೂ ವಸತಿಗೆ ಪ್ರಾಮುಖ್ಯತೆ ನೀಡಿದ್ದರು. ಮಲ್ಲಿಕಾರ್ಜುನ ಶ್ರೀಗಳು ವಿದ್ಯಾಸಂಸ್ಥೆ ಸ್ಥಾಪಿಸಿ ಜ್ಞಾನ ದಾಸೋಹಕ್ಕೆ ಪ್ರಾಮುಖ್ಯತೆ ನೀಡಿದರು ಎಂದು ತಿಳಿಸಿದರು.

ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿಗಳು ಮಾತನಾಡಿ, ಮಲ್ಲಿಕಾರ್ಜುನ ಶ್ರೀಗಳು ಬಾಲ್ಯದಲ್ಲಿ ಅಥಣಿ ಶಿವಯೋಗಿಗಳ ಆಶೀರ್ವಾದ ಪಡೆದವರು. ಅಂದು ಶಿವಯೋಗಿಗಳ ಹೇಳಿಕೆಯಂತೆ ಮಲ್ಲಿಕಾರ್ಜುನ ಶ್ರೀಗಳು ಸಾಮಾಜಕ್ಕೆ ದೊರಕಿದರು. ಜಯದೇವ ಗುರುಗಳು ಮಲ್ಲಿಕಾರ್ಜುನ ಶ್ರೀಗಳನ್ನು ಗುರುತಿಸಿ ಕಾಶಿಗೆ ಕಳುಹಿಸಿ ವಿದ್ಯಾಭ್ಯಾಸ ಮಾಡಿಸಿದರು. ಶ್ರೀಗಳು ನಾಲ್ಕು ಐದು ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರು. ಪೀಠಾಧಿಕಾರದ ನಂತರ ಶಿಕ್ಷಣಕ್ಕೆ ಒತ್ತು ನೀಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು. ಶ್ರೀಗಳ ಆಶೀರ್ವಾದ ಪಡೆದವರು ಸಮಾಜದಲ್ಲಿ ಉತ್ತಮ ಹುದ್ದೆ ಉತ್ತಮ ವ್ಯಕ್ತಿಗಳಾಗಿ ಬದುಕುತ್ತಿದ್ದಾರೆ. ಶ್ರೀಗಳದ್ದು ಕಂಚಿನ ಕಂಠ, ಅವರ ಮಾತುಗಳು ಮಾತೆಂಬುದು ಜ್ಯೋತಿರ್ಲಿಂಗವಾಗಿತ್ತು ಎಂದು ನುಡಿದರು.

ಶಿವಯೋಗಿ ಸಿ.ಕಳಸದ, ರಾವಂದೂರಿನ ಶ್ರೀ ಮೋಕ್ಷಪತಿ ಮಹಾಸ್ವಾಮಿಜಿ. ಮಾಜಿ ಶಾಸಕ ಪಿ ರಮೇಶ್, ಎಸ್‌ಜೆಎಂ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಕೆ.ಬಿ.ಗುಡಸಿ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಮಾತನಾಡಿದರು.

ಕಾರ್ಯಕ್ರಮದ ಮುನ್ನ ಧ್ವಜಾರೋಹಣವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ನೆರವೇರಿಸಿದರು.

ಗುರುಮಿಠಕಲ್ ಶ್ರೀ.ಶಾಂತವೀರ ಸ್ವಾಮಿಗಳು, ಚಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ, ಶ್ರೀ ಸೇವಾಲಾಲ್ ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಬಸವ ಮಹಾಂತ ಸ್ವಾಮಿಗಳು, ಶರಣೆ ಶ್ರೀ ಸತ್ಯಕ್ಕ ಅಕ್ಕ ಜಯಶ್ರೀ, ಮಾಜಿ ಶಾಸಕ ತಿಪ್ಪೇರುದ್ರಪ್ಪ, ಪಟೇಲ್ ಶಿವಕುಮಾರ್, ಹರಗುರು ಚರಮೂರ್ತಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪನವರ ಜನ್ಮ ಶತಮಾನೋತ್ಸವ ಅಂಗವಾಗಿ ಸತ್ಯ ಶುದ್ಧ ಕಾಯಕ ತ್ರೈಮಾಸಿಕ ಪುಸ್ತಕ ಬಿಡುಗಡೆ ಮಾಡಲಾಯಿತು. ಉಮೇಶ್ ಪತ್ತಾರ್ ಪ್ರಾರ್ಥಿಸಿ ಮುರುಗೇಶ್ ಸ್ವಾಗತಿಸಿ, ಶ್ರೀ.ಮಲ್ಲಿಕಾರ್ಜುನ ಸ್ವಾಮಿಗಳು ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಾಟಮ್‌...ಕುಡಿವ ನೀರಿನ ಕೊರತೆಯಾಗದಂತೆ ನಿಗಾವಹಿಸಿ: ಸಿದ್ದು ಪಾಟೀಲ್‌