ಕಬಡ್ಡಿ ಆಟದಿಂದ ಶಿಸ್ತು, ಏಕಾಗ್ರತೆ, ಚುರುಕುತನ: ಮಲ್ಲಿಕಾರ್ಜುನ ಭಾವಿಕಟ್ಟಿ

KannadaprabhaNewsNetwork |  
Published : Feb 03, 2025, 12:31 AM IST
01 ಎಚ್‍ಆರ್‍ಆರ್ 03ಹರಿಹರ ಸಮೀಪದ ಕವಲೆತ್ತು ಗ್ರಾಮದಲ್ಲಿ ಶನಿವಾರ ಕಬಡ್ಡಿ  ಕ್ರೀಡಾಪಟುಗಳಿಗೆ ಆಯೋಜಿಸಲಾಗಿದ್ದ  ತರಬೇತಿ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಭಾವಿಕಟ್ಟಿ, ದೇವರಾಜ್ ದ್ಯಾವಣ್ಣ ಮಲ್ಲನಗೌಡ ಮುದಿಗೌಡ್ರು, ಚಂದ್ರಪ್ಪ, ಶ್ರೀಧರ್ ಕಾಗಿನೆಲಿ, ಜಿ.ಜಿ ಹಿರೇಮಠ, ಶ್ರೀಕಾಂತ್, ಕಬಡ್ಡಿ ಆಟಗಾರರು ಕ್ರೀಡಾ ಪ್ರೇಮಿಗಳು ಭಾಗವಹಿಸಿದ್ದರು. | Kannada Prabha

ಸಾರಾಂಶ

ಕಬಡ್ಡಿ ಟೀಮ್‌ ವರ್ಕ್ ಕ್ರೀಡೆಯಾಗಿದ್ದು, ಆಟಗಾರರಲ್ಲಿ ಶಿಸ್ತು, ಏಕಾಗ್ರತೆ ಹೆಚ್ಚಿಸುವುದು ಹಾಗೂ ಮನಸ್ಸನ್ನು ಚುರುಕುಗೊಳಿಸಲು ಸಹಾಯ ಮಾಡುತ್ತದೆ ಎಂದು ಅನುದಾನಿತ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಭಾವಿಕಟ್ಟಿ ಹೇಳಿದ್ದಾರೆ.

ಹರಿಹರ: ಕಬಡ್ಡಿ ಟೀಮ್‌ ವರ್ಕ್ ಕ್ರೀಡೆಯಾಗಿದ್ದು, ಆಟಗಾರರಲ್ಲಿ ಶಿಸ್ತು, ಏಕಾಗ್ರತೆ ಹೆಚ್ಚಿಸುವುದು ಹಾಗೂ ಮನಸ್ಸನ್ನು ಚುರುಕುಗೊಳಿಸಲು ಸಹಾಯ ಮಾಡುತ್ತದೆ ಎಂದು ಅನುದಾನಿತ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಭಾವಿಕಟ್ಟಿ ಹೇಳಿದರು.

ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ಮಹಿಳಾ ಸೀನಿಯರ್ ಕಬಡ್ಡಿ ಪಂದ್ಯಾವಳಿಗೆ ಹಾವೇರಿ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಸಹಭಾಗಿತ್ವದಲ್ಲಿ ಕವಲೆತ್ತು ಗ್ರಾಮದಲ್ಲಿ ಶನಿವಾರ ಕ್ರೀಡಾಪಟುಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಬ್ಬಡಿ ಭಾರತದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಯಾಗಿದೆ. ಅದನ್ನು ತ್ವರಿತವಾಗಿ ಕರಗತ ಮಾಡಿಕೊಳ್ಳಲು ಸಾಕಷ್ಟು ತ್ರಾಣ, ಶಕ್ತಿ, ವೇಗ ಕಾರ್ಯ ತಂತ್ರದ ಮನಸ್ಥಿತಿಯ ಅಗತ್ಯವಿದೆ. ಕಬಡ್ಡಿ ಕ್ರೀಡೆ ವೈಶಿಷ್ಟವೆಂದರೆ, ಕ್ರಿಕೆಟ್, ಫುಟ್ಬಾಲ್ ಇತ್ಯಾದಿ ಯಾವುದೇ ಸಲಕರಣೆಗಳು ಅಗತ್ಯವಿಲ್ಲ. ಆಸಕ್ತಿಯಿಂದ ಭಾಗವಹಿಸಿದಾಗ ಯಶಸ್ಸು ಸಾಧ್ಯ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.

ಅಧ್ಯಕ್ಷತೆಯನ್ನು ದೇವರಾಜ್ ದ್ಯಾವಣ್ಣ ವಹಿಸಿದ್ದರು. ಹಾವೇರಿ ಜಿಲ್ಲಾ ಕಬಡ್ಡಿ ಸಂಸ್ಥೆಯ ಮಾಜಿ ಸಹ ಕಾರ್ಯದರ್ಶಿ ಮಲ್ಲನಗೌಡ ಮುದಿಗೌಡರ, ಖಜಾಂಚಿ ಚಂದ್ರಪ್ಪ, ಕಾರ್ಯದರ್ಶಿ ಶ್ರೀಧರ್ ಕಾಗಿನೆಲಿ, ರಾಷ್ಟ್ರೀಯ ತೀರ್ಪುಗಾರರಾದ ಜಿ.ಜಿ. ಹಿರೇಮಠ, ಶ್ರೀಕಾಂತ್, ಸದಸ್ಯರಾದ ಉಮೇಶ್, ಪ್ರಾ.ಶಾ. ಬಾವಿಕಟ್ಟಿ ಹಾಗೂ ಸ್ಥಳೀಯ ಕಬಡ್ಡಿ ಆಟಗಾರರು, ಕ್ರೀಡಾಪ್ರೇಮಿಗಳು ಭಾಗವಹಿಸಿದ್ದರು.

- - - -01ಎಚ್‍ಆರ್‍ಆರ್03.ಜೆಪಿಜಿ:

ಹರಿಹರ ಸಮೀಪದ ಕವಲೆತ್ತು ಗ್ರಾಮದಲ್ಲಿ ಶನಿವಾರ ಕಬಡ್ಡಿ ಕ್ರೀಡಾಪಟುಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!