ಕನ್ನಡಪ್ರಭ ವಾರ್ತೆ ಮಡಿಕೇರಿ
ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿರುವ 17 ಅಧಿಕ ತಂತ್ರಾಂಶಗಳ ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಕಾರ್ಯನಿರ್ವಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಬೇಕು. ಇವುಗಳನ್ನು ಸಮರ್ಪಕವಾಗಿ ನೀಡದೆ ಕರ್ತವ್ಯದ ಮೇಲೆ ಒತ್ತಡ ಸರಿಯಲ್ಲವೆಂದು ಹೇರುತ್ತಿರುವುದು ಅಸಮಾಧಾನ ವ್ಯಕ್ತಪಡಿಸಿದರು.
ಮೂಲಭೂತ ಸೌಲಭ್ಯಗಳನ್ನು ನೀಡಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.ಬೇಡಿಕೆಗಳು:
ಗ್ರಾಮ ಸಹಾಯಕರಿಗೆ ರು.27 ಸಾವಿರ ಕನಿಷ್ಠ ವೇತನ ನೀಡಬೇಕು, ವರ್ಕ್ಷಾರ್ಟ್ ನಿಗದಿಪಡಿಸಬೇಕು, ನಿವೃತ್ತಿ ಹೊಂದಿದ, ಹೊಂದುತ್ತಿರುವ ಗ್ರಾಮ ಸಹಕಾಯಕರಿಗೆ ರು. 10 ಲಕ್ಷ ಇಡುಗಂಟು ಹಾಗೂ 15 ಸಾವಿರ ರು. ನಿವೃತ್ತಿ ವೇತನ ನೀಡಬೇಕು, ಇಎಸ್, ಪಿಎಫ್ ಹಾಗೂ ಭವಿಷ್ಯ ನಿಧಿ ಸೌಲಭ್ಯ ನೀಡಬೇಕು, ಮಹಿಳಾ ಗ್ರಾಮ ಸಹಾಯಕರಿಗೆ ಹೆರಿಗೆ ರಜೆ ನೀಡಬೇಕು, ಚುನಾವಣೆ ಭತ್ಯೆ ನೀಡಬೇಕು, ಎನ್ಪಿಎಸ್ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ.ಶೆಟ್ಟಿ, ಉಪಾಧ್ಯಕ್ಷ ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಪಾಟೀಲ್, ಗೌರವಾದ.ಕ ಗೋಪಿನಾಥ್. ಖಜಾಂಚಿ ರವಿಚಂದ್ರ, ಮಡಿಕೇರಿ ತಾಲೂಕು ಅಧ್ಯಕ್ಷ ಸಂದೀಪ್ ವಿರಾಜಪೇಟೆ ಕೃಷ್ಣ, ಪೊನ್ನಂಪೇಟೆ ನಿತಿನ್, ಕುಶಾಲನಗರ ಗುರು ದರ್ಶನ್, ಸೋಮವಾರಪೇಟೆ ಸಂತೋಷ್, ಕೊಡಗು ಜಿಲ್ಲಾ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಜನಾರ್ದನ, ತಾಲ್ಲೂಕು ಅಧ್ಯಕ್ಷ ಪ್ರಸಾದ್ ಪೂಜಾರಿ ಸೇರಿದಂತೆ ಆಡಳಿತ ಅಧಿಕಾರಿಗಳು ಪಾಲ್ಗೊಂಡಿದ್ದರು.