ಗ್ರಾಮಾಂತರಕ್ಕೆಸರ್ಕಾರಿ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ

KannadaprabhaNewsNetwork |  
Published : Apr 13, 2026, 01:15 AM IST
60 | Kannada Prabha

ಸಾರಾಂಶ

ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಈಗಾಗಲೇ ನೂತನವಾಗಿ ಆಧುನಿಕ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಅಗತ್ಯ ಯಂತ್ರೋಪಕರಣ ಒದಗಿಸಲಾಗಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡು

ನಂಜನಗೂಡಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ದರ್ಶನ್ ಧ್ರುವನಾರಾಯಣ ಶನಿವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿರುವ ಸಾರ್ವಜನಿಕರ ಜೊತೆಗೆ ಆಸ್ಪತ್ರೆಯಲ್ಲಿ ದೊರಕುತ್ತಿರುವ ಸೇವೆಯ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸಲು ಸರ್ಕಾರ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಸೌಕರ್ಯ ಒದಗಿಸಿದೆ, ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಈಗಾಗಲೇ ನೂತನವಾಗಿ ಆಧುನಿಕ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಅಗತ್ಯ ಯಂತ್ರೋಪಕರಣ ಒದಗಿಸಲಾಗಿದೆ. ನಾನು ಭೇಟಿ ನೀಡಿದ್ದ ವೇಳೆ ರಾತ್ರಿ ಪಾಳಿಯಲ್ಲಿ ವೈದ್ಯರು ಲಭ್ಯವಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರ ಜೊತೆಗೆ ಚರ್ಚೆ ನಡೆಸಿ ಮಾಹಿತಿ ತಿಳಿದಿದ್ದೇನೆ ಎಂದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ದೊರಕುತ್ತಿರುವ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಆಸ್ಪತ್ರೆ ಆವರಣದಲ್ಲಿ ಶುಚಿತ್ವ ಕಾಪಾಡಿಕೊಂಡು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಪ್ರಮುಖವಾಗಿ ರಾತ್ರಿ ವೇಳೆ ಅಪಘಾತಗಳಲ್ಲಿ ಗಾಯಗೊಂಡವರು ಆಸ್ಪತ್ರೆಗೆ ಬಂದಾಗ ಅವರಿಗೆ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ ನೀಡಿ ಎಂದು ವೈದ್ಯರಿಗೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಚಂಡಿಕಾ ಹೋಮ
ಭಾರತದ ನರ್ಸಿಂಗ್‌ಗೆ ವಿಶ್ವಾದ್ಯಂತ ಬೇಡಿಕೆ: ದಿನೇಶ್‌