ಒಳಮೀಸಲಾತಿ ಬಗ್ಗೆ ಸದನದಲ್ಲಿ ಚರ್ಚೆ

KannadaprabhaNewsNetwork |  
Published : Oct 26, 2024, 12:59 AM ISTUpdated : Oct 26, 2024, 01:00 AM IST
ಪೋಟೋ೨೫ಸಿಎಲ್‌ಕೆ೪ ಚಳ್ಳಕೆರೆ ನಗರದ ಶಾಸಕ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಮಾದಿಗ ಮಹಾಸಭಾ ಹಾಗೂ ಒಳಮೀಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಒಂದುದಿನದ ಧರಣಿಸತ್ಯಾಗ್ರಹದಲ್ಲಿ ಶಾಸಕ ಟಿ.ರಘುಮೂರ್ತಿ ಮನವಿ ಅರ್ಪಿಸಿದರು. | Kannada Prabha

ಸಾರಾಂಶ

ಚಳ್ಳಕೆರೆ: ಮಾದಿಗ ಸಮುದಾಯದ ಒಳಮೀಸಲಾತಿ ಬಗ್ಗೆ ವಿಧಾನಸಭೆ ಅಧಿವೇಶನದ ವೇಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯದೊರಕಿಸಿಕೊಡುವುದಾಗಿ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಭರವಸೆ ನೀಡಿದ್ದಾರೆ.

ಚಳ್ಳಕೆರೆ: ಮಾದಿಗ ಸಮುದಾಯದ ಒಳಮೀಸಲಾತಿ ಬಗ್ಗೆ ವಿಧಾನಸಭೆ ಅಧಿವೇಶನದ ವೇಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯದೊರಕಿಸಿಕೊಡುವುದಾಗಿ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಭರವಸೆ ನೀಡಿದ್ದಾರೆ.

ಶಾಸಕ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಮಾದಿಗ ಮಹಾಸಭಾ ಹಾಗೂ ಒಳಮೀಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಒಂದುದಿನದ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಒ‍ಳಮೀಸಲಾತಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಸರ್ಕಾರ ಈ ವಿಷಯ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಹಂತದಲ್ಲೂ ಸಮುದಾಯಕ್ಕೆ ಅನ್ಯಾಯವಾಗದಂತೆ ಜಾಗ್ರತೆ ವಹಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಾದಿಗ ಮಹಾಸಭಾ ಅಧ್ಯಕ್ಷ ದ್ಯಾವರನಹಳ್ಳಿ ತಿಪ್ಪೇಸ್ವಾಮಿ, ದಲಿತ ಸಂಘಟನೆಗಳ ಪ್ರಮುಖ ಹೋರಾಟಗಾರರಾದ ಟಿ.ವಿಜಯಕುಮಾರ್, ಕೃಷ್ಣಮೂರ್ತಿ, ಬೋರಣ್ಣ, ಬಿ.ಪಿ. ಪ್ರಕಾಶ್‌ಮೂರ್ತಿ, ಶಿವಣ್ಣ, ಆನಂದಕುಮಾರ್, ಹೊನ್ನೂರುಸ್ವಾಮಿ, ಭೀಮನಕೆರೆ ಶಿವಮೂರ್ತಿ, ಎಚ್.ಪ್ರಕಾಶ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಜಾತಾ, ಸದಸ್ಯರಾದ ರಾಘವೇಂದ್ರ, ರಮೇಶ್‌ಗೌಡ, ಕೆ.ವೀರಭದ್ರಪ್ಪ, ಸುಮಾ, ನಾಮಿನಿ ಸದಸ್ಯ ಬಡಗಿ ಪಾಪಣ್ಣ, ಆರ್. ವೀರಭದ್ರಪ್ಪ, ಅನ್ವರ್‌ಮಾಸ್ಟರ್ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು