ರೈತರ ಸಮ್ಮುಖದಲ್ಲೇ ಬಿಡದಿಚರ್ಚೆ ಆಗಬೇಕು: ಅಶೋಕ್‌

KannadaprabhaNewsNetwork |  
Published : Jun 24, 2026, 02:00 AM IST
ಆರ್‌.ಅಶೋಕ್‌  | Kannada Prabha

ಸಾರಾಂಶ

ಬಿಡದಿ ಟೌನ್‌ಶಿಪ್‌ ವಿಚಾರ ರೈತರ ನಡುವೆಯೇ ಚರ್ಚೆಯಾಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರತಿಪಾದಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನವದೆಹಲಿ:

ಬಿಡದಿ ಟೌನ್‌ಶಿಪ್‌ ವಿಚಾರ ರೈತರ ನಡುವೆಯೇ ಚರ್ಚೆಯಾಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರತಿಪಾದಿಸಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಡಿಕೆಶಿ-ಎಚ್‌ಡಿಕೆ ಪಂಥಾಹ್ವಾನ ಕುರಿತು ಪ್ರತಿಕ್ರಿಯಿಸಿ, ಡಿಕೆಶಿಯವರು ಪಂಥಾಹ್ವಾನಕ್ಕೆ ಬರುವುದಾಗಿ ಈ ಹಿಂದೆಯೂ ಹೇಳಿದ್ದರು. ಆದರೆ, ಬಂದಿರಲಿಲ್ಲ. ಈಗ ಮತ್ತೆ ಪಂಥಾಹ್ವಾನ ನೀಡಿದ್ದಾರೆ. ಆದರೆ, ಬಿಡದಿ ಟೌನ್‌ಶಿಪ್‌ ವಿಚಾರ ರೈತರ ನಡುವೆಯೇ ಚರ್ಚೆಯಾಗಬೇಕು. ಇದು ರೈತರ ಸಮಸ್ಯೆಯಾಗಿದ್ದು, ರೈತರ ಜೊತೆ ಚರ್ಚೆಯಾದರೆ ಅದು ನಿಜವಾದ ಚರ್ಚೆಯಾಗುತ್ತದೆ. ರೈತರ ಜಮೀನಿನ ಬಗ್ಗೆ ಚರ್ಚೆ ಮಾಡಲು ಎಚ್‌.ಡಿ.ಕುಮಾರಸ್ವಾಮಿಯವರು ಸಿಎಂ ಕಚೇರಿಗೆ ಯಾಕೆ ಹೋಗಬೇಕು. ರೈತರ ಸಮ್ಮುಖದಲ್ಲಿಯೇ ಚರ್ಚೆಯಾಗಲಿ ಎಂದು ಹೇಳಿದರು.

ಇದೇ ವೇಳೆ, ಡಿಕೆಶಿ ವಿರುದ್ಧ ಹರಿಹಾಯ್ದ ಅಶೋಕ್‌, ಬಿಡದಿ ಟೌನ್‌ಶಿಪ್‌ ಯೋಜನೆಯಲ್ಲಿ ನಾಲ್ಕೈದು ಸಾವಿರ ಕೋಟಿ ರೂ.ಗಳನ್ನು ಹೊಡೆಯುತ್ತಿದ್ದಾರೆ. ಈ ಹಣ ಯಾರ ಜೇಬಿಗೆ ಹೋಗುತ್ತದೆ. ಭ್ರಷ್ಟಾಚಾರ ಮಾಡಲೆಂದೇ ಕಾಂಗ್ರೆಸ್‌ ಹೈಕಮಾಂಡ್‌, ಡಿ.ಕೆ.ಶಿವಕುಮಾರ್ ಅವರನ್ನು ರಾಜ್ಯದ ಸಿಎಂ ಆಗಿ ನೇಮಿಸಿದೆ. ಡಿಕೆಶಿಯಿಂದ ಕಾಂಗ್ರೆಸ್‌ ಹೈಕಮಾಂಡ್ ಹಣ ಪಡೆಯುತ್ತದೆ ಎಂದು ಆರೋಪಿಸಿದರು.

ರೈತರ ಒಕ್ಕೆಲೆಬ್ಬಿಸುವ ಕೆಲಸ- ವಿಜಯೇಂದ್ರ:

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರವು ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಅಲ್ಲಿನ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ. ರೈತರ ಹಿತವನ್ನು ಕಡೆಗಣಿಸಿ ರಿಯಲ್ ಎಸ್ಟೇಟ್‌ಗೆ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಂಧ್ರ ಜೋಳ ಕರ್ನಾಟಕದಲ್ಲಿ ಮಾರಾಟ ಮಾಡುವ ಜಾಲ ಪತ್ತೆ; ಪ್ರಕರಣ ದಾಖಲು
ರಾಸಾಯನಿಕ ಗೊಬ್ಬರ ತಗ್ಗಿಸಿ, ಸಾವಯವ ಕೃಷಿಗೆ ಆದ್ಯತೆ ನೀಡಿ