ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಹಿನ್ನೆಲೆಯಲ್ಲಿ ಸೆ.16 ರಂದು ವಿಶೇಷ ಸಚಿವ ಸಂಪುಟ ನಡೆಸಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಹಾಗೂ ಪರಿಹಾರ ನಿಗದಿ ಬಗ್ಗೆ ಅಂತಿಮ ತೀರ್ಮಾನ ಮಾಡಲು ನಿರ್ಧರಿಸಲಾಗಿದೆ.
ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಜತೆಗೆ ಭೂಸ್ವಾಧೀನ ಸಂಬಂಧ ಏಕರೂಪದ ದರ ನಿಗದಿಪಡಿಸಲು ಹಾಗೂ ಇನ್ನಿತರ ಆಡಳಿತಾತ್ಮಕ ವಿಷಯಗಳಿಗೆ ಅನುಮೋದನೆ ನೀಡುವ ಕುರಿತು ವಿಸ್ತೃತವಾದ ಹಾಗೂ ಸಕಾರಾತ್ಮಕ ಚರ್ಚೆ ನಡೆದಿದೆ. ಈ ಬಗ್ಗೆ ಮತ್ತಷ್ಟು ಚರ್ಚೆ ಅಗತ್ಯವಿರುವ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ ವಿಶೇಷ ಸಂಪುಟ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದರು.ಪರಿಹಾರ ನಿಗದಿಯದ್ದೇ ಸಮಸ್ಯೆ:
ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಪರಿಣಾಮ ಹಾಗೂ ನ್ಯಾಯಾಲಯ ಸೂಚಿಸಿರುವ ಪರಿಹಾರ ನೀಡಿದರೆ ಭೂಸ್ವಾಧೀನ ವೆಚ್ಚ 2 ಲಕ್ಷ ಕೋಟಿ ರು. ದಾಟಲಿದೆ. ಹೀಗಾಗಿ ಯಾವ ರೀತಿಯಲ್ಲಿ ಪರಿಹಾರ ನಿಗದಿ ಮಾಡಬೇಕು. ನಿಗದಿ ಮಾಡಿರುವ ಪರಿಹಾರವನ್ನು ಯಾವ ರೂಪದಲ್ಲಿ ನೀಡಬೇಕು ಎಂಬ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಆದರೆ ಈ ವಿಷಯದ ಬಗ್ಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸೆ.16ಕ್ಕೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ.