ಕನ್ನಡಪ್ರಭ ವಾರ್ತೆ ಕಲಬುರಗಿ
ಸಮಿತಿಯ ಅಧ್ಯಕ್ಷ ಲಕ್ಷ್ಮಣ ದಸ್ತಿಯವರು ನೂತನ ಸಂಸದರಿಗೆ ಅಭಿನಂದನೆಯನ್ನು ಸಲ್ಲಿಸಿ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕೇಂದ್ರ ಸರಕಾರ ಘೋಷಣೆ ಮಾಡಿರುವ ಯೋಜನೆಗಳ ಬಗ್ಗೆ ವಿವರಿಸಿದರು.
ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆ, ಜವಳಿ ಪಾರ್ಕ್ ಅನುಷ್ಠಾನ, ಕಲಬುರಗಿ ಎರಡನೇ ವರ್ತುಲ ರಸ್ತೆ, ಕಲ್ಯಾಣ ಪಥ ಹೆದ್ದಾರಿ ರಸ್ತೆಗಳು, ಏಮ್ಸ್ ಸ್ಥಾಪನೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ನೂತನ ಸಂಸದರಿಗೆ ಮನವರಿಕೆ ಮಾಡಿದರು.ಪರಿಣಿತ ತಜ್ಞರಾದ ಪ್ರೊ. ಆರ್.ಕೆ. ಹುಡಗಿ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶದ ವಿಭಾಗೀಯ ಕೇಂದ್ರ, ಕಲಬುರಗಿಯಲ್ಲಿ ಒಂದು ದಿನದ ಬೃಹತ್ ಕಾರ್ಯಾಗಾರ ಸಮಿತಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕಾರ್ಯಾಗಾರದ ಉದ್ಘಾಟನೆ ಎ.ಐಸಿ.ಸಿ. ಅಧ್ಯಕ್ಷರಿಂದ ಮಾಡಿಸಿ ಇದರಲ್ಲಿ ಕಲ್ಯಾಣ ಕರ್ನಾಟಕದ ಸಚಿವರು, ಸಂಸದರು, ಶಾಸಕರು ಸೇರಿದಂತೆ ಸಂಘ ಸಂಸ್ಥೆಗಳ ಅಧ್ಯಕ್ಷರು, ವಿಶೇಷವಾಗಿ ಏಳು ಜಿಲ್ಲೆಯ ಪರಿಣಿತ ವ್ಯಕ್ತಿಗಳನ್ನು ಆಹ್ವಾನಿಸಿ 371ನೇ(ಜೆ) ಕಲಂ ಸಾಧಕ ಬಾಧಕಗಳ ಬಗ್ಗೆ ಚರ್ಚಿಸುವುದರ ಜೊತೆಗೆ ಇದರ ಪರಿಣಾಮಕಾರಿ ಅನುಷ್ಠಾನದ ಕ್ರಮಗಳು ಹಾಗೂ ಕಲ್ಯಾಣ ಕರ್ನಾಟಕದ ರಚನಾತ್ಮಕ ಅಭಿವೃದ್ಧಿ ವಿಚಾರಗಳನ್ನು ಚರ್ಚಿಸುವ ಫಲಪ್ರದ ಐತಿಹಾಸಿಕ ವೇದಿಕೆಯಾಗಬೇಕು. ಇದಕ್ಕೆ ನೂತನ ಸಂಸದರು ಸ್ಪಂದಿಸಬೇಕೆಂದು ತಿಳಿಸಿದರು.
ನಿಯೋಗದಲ್ಲಿ ಪ್ರೊ. ಬಸವರಾಜ ಕುಮನೂರ, ಪ್ರೊ. ಶಂಕ್ರೆಪ ಹತ್ತಿ, ಡಾ. ಬಸವರಾಜ ಕಳಸಾ, ಡಾ. ಮಾಜಿದ್ ದಾಗಿ, ವಿನಾಯಕ ಪತ್ರಗಾರ, ಜಾನ್ ವಿಲ್ಸನ್, ರೌಫ್ ಖಾದರಿ, ಅಸ್ಲಂ ಚೌಂಗೆ, ಶಿವಾನಂದ ಕಾಂದೆ, ಮಂಜೂರ ಡೆಕ್ಕನಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.