ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸಿ

KannadaprabhaNewsNetwork |  
Published : Aug 19, 2026, 02:45 AM IST
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಆರಂಭ -ಸಂಸದ ಪಿ.ಸಿ.ಗದ್ದಿಗೌಡರ ಸೇರಿ ಹಲವು ನಾಯಕರು ಬಾಗಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆವಾಲ್ಮೀಕಿ ಹಗರಣದ ಲೂಟಿ ರೂವಾರಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಾಗಲಕೋಟೆಯ ಬಿಜೆಪಿ ಜಿಲ್ಲಾ ಘಟಕದಿಂದ ಅಹೋರಾತ್ರಿ ಧರಣಿ ಆರಂಭಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ವಾಲ್ಮೀಕಿ ಹಗರಣದ ಲೂಟಿ ರೂವಾರಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಾಗಲಕೋಟೆಯ ಬಿಜೆಪಿ ಜಿಲ್ಲಾ ಘಟಕದಿಂದ ಅಹೋರಾತ್ರಿ ಧರಣಿ ಆರಂಭಿಸಿದರು.

ನವನಗರದ ಜಿಲ್ಲಾಡಳಿತ ಭವನ ಎದುರು ಧರಣಿ ನಡೆಸಿದ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಭ್ರಷ್ಟಾಚಾರ ವಿರುದ್ಧ ಬಿಜೆಪಿ ಹೋರಾಟ ಮಾಡಿ ನಾಗೇಂದ್ರ ರಾಜೀನಾಮೆ ನೀಡುವವರೆಗೆ ಶಪಥ ಮಾಡಿದ್ದೇವೆ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಸಚಿವ ಬಿ.ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರೆಯುತ್ತೆ. ಬಹಳ ಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕಾಂಗ್ರೆಸ್‌ಗೆ ಗೌರವ ಇಲ್ಲ. ದೇಶದಿಂದ ಹೊರಗೆ ಹಾಕಬೇಕಿದೆ. ಬಾಂಗ್ಲಾದಿಂದ ಬಂದವರಿಗೆ ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ವೀರಣ್ಣ ಚರಂತಿಮಠ, ವಾಲ್ಮೀಕಿ ಹಗರಣದಲ್ಲಿ ನೂರಾರು ಕೋಟಿ ರೂಪಾಯಿ ಹಣ ದುರುಪಯೋಗವಾಗಿದ್ದು, ವಿವಿಧ ರಾಜ್ಯಗಳ ಚುನಾವಣೆಗೆ ಬಳಸಲಾಗಿದೆ. ಸಂವಿಧಾನದ ಹೆಸರೇಳುವ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಸಂವಿಧಾನದ ಬಗ್ಗೆ ಸ್ಪಷ್ಟ ಅರಿವಿಲ್ಲ. ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಧ್ಯಕ್ಷರು, ಸಭಾಪತಿಗಳ ಆಯ್ಕೆ ಹಾಗೂ ರಾಜೀನಾಮೆ ವಿಚಾರಗಳಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಗಾಳಿಗೆ ತೂರಲಾಗಿದೆ. ಹಿರಿಯ ಸದಸ್ಯರಾದ ಬಸವರಾಜ ಹೊರಟ್ಟಿ ಅವರಂತಹ ಹಿರಿಯರಿಗೂ ಅವಮಾನ ಮಾಡಿ ರಾಜೀನಾಮೆ ಕೊಡಿಸಲಾಗಿದೆ ಎಂದು ಟೀಕಿಸಿದರು.

ಸಚಿವ ನಾಗೇಂದ್ರ ಅವರು ಸಂಪೂರ್ಣವಾಗಿ ರಾಜೀನಾಮೆ ನೀಡಿ, ಸೂಕ್ತ ತನಿಖೆ ಆಗುವವರೆಗೆ ಮತ್ತು ಭ್ರಷ್ಟ ಸರ್ಕಾರದ ವಿರುದ್ಧದ ತಮ್ಮ ಹೋರಾಟ ನಿಲ್ಲುವುದಿಲ್ಲ. ವಿಧಾನ ಮಂಡಲದ ಉಭಯ ಸದನಗಳಲ್ಲೂ ಹಾಗೂ ಬೀದಿಗಳಲ್ಲೂ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದರು.

ಧರಣಿಯಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ, ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಮುಖಂಡರಾದ ಜಿ.ಎನ್.ಪಾಟೀಲ, ಬಸವರಾಜ ಯಂಕಂಚಿ, ರಾಜು ರೇವಣಕರ್, ಎಂ.ಎಸ್.ದಡ್ಡೇನವರ್, ರಾಜು ಗಾಣಗೇರ, ಬಸವರಾಜ ಹುನಗುಂದ, ಸುರೇಶ ಕೊಣ್ಣೂರ, ಶಿವಾನಂದ ಸುರಪುರ ಸೇರಿದಂತೆ ಅನೇಕ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೋಗ್ಯಕರ ಪರಿಸರ ನಿರ್ಮಿಸುವ ಉದ್ದೇಶದಿಂದ ಲಕ್ಷ ವೃಕ್ಷ ಸಂಕಲ್ಪ
ಸೆ.4, 5ರಂದು ಕೃಷ್ಣ ವಾದಿರಾಜ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿ