ಸರ್ಕಾರ ಬರ್ಕಾಸ್ತುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ: ಅಶ್ರಫ್ ಕಲ್ಲೇಗ

KannadaprabhaNewsNetwork |  
Published : May 28, 2025, 11:53 PM IST
ಫೋಟೋ: ೨೮ಪಿಟಿಆರ್-ಪ್ರೆಸ್ ಕಲ್ಲೆಗಸುದ್ಧಿಗೋಷ್ಠಿಯಲ್ಲಿ ಅಶ್ರಫ್ ಕಲ್ಲೇಗ ಮಾತನಾಡಿದರು. | Kannada Prabha

ಸಾರಾಂಶ

ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ಅಧ್ಯಕ್ಷ ಅಶ್ರಫ್ ಕಲ್ಲೇಗ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಂಟ್ವಾಳ ತಾಲೂಕಿನಲ್ಲಿ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆ ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಪುತ್ತೂರು

ಜಿಲ್ಲೆಯಲ್ಲಿ ಕೊಲೆಗಳ ಮೇಲೆ ಕೊಲೆಗಳಾಗುತ್ತಿದ್ದು ಈ ಎಲ್ಲಾ ಘಟನೆ ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲಗೊಂಡಿರುವುದು ಕಂಡು ಬರುತ್ತಿದ್ದು, ಪೊಲೀಸ್ ಇಲಾಖೆಯ ವೈಫಲ್ಯ ನೇರವಾಗಿ ಕಂಡು ಬರುತ್ತಿದೆ. ಇಲ್ಲಿ ಸರ್ಕಾರವೇ ಇಲ್ಲವೇ ಎಂಬ ಅನುಮಾನ ಗೋಚರಿಸುತ್ತಿದೆ. ತಕ್ಷಣ ಈ ಸರ್ಕಾರ ಬರ್ಕಾಸ್ತುಗೊಳಿಸಿ ರಾಜ್ಯದಲ್ಲಿ ರಾಷ್ಟçಪತಿಗಳ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳ ತಾಲೂಕಿನಲ್ಲಿ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆ ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ ಎಂದು ಆರೋಪಿಸಿದರು.

ಇತ್ತೀಚೆಗಷ್ಟೆ ಸುಹಾಸ್ ಶೆಟ್ಟಿ ಹತ್ಯೆಯಾದ ಬಳಿಕ ಅನೇಕ ಕಡೆ ನಡೆದ ಸಂತಾಪ ಸಭೆಗಳಲ್ಲಿ ಪ್ರತೀಕಾರದ ಭಾಷಣ ಮಾಡಲಾಗಿತ್ತು. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಸರ್ಕಾರ ಕೂಡಾ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗೃಹಸಚಿವರಿಗೆ ಪೊಲೀಸ್ ಇಲಾಖೆಯನ್ನು ನಿಯಂತ್ರಿಸುವ ತಾಕತ್ತು ಇಲ್ಲ ಎಂದು ದೂರಿದರು.

ರಾಜ್ಯದ ಸ್ಪೀಕರ್ ಸಾಹೇಬರ ‘ಅಡ್ಜಸ್ಟ್‌ಮೆಂಟ್‌’ ರಾಜಕೀಯ ಪರಿಸ್ಥಿತಿಯಿಂದಾಗಿ ಜಿಲ್ಲೆಯಲ್ಲಿ ಹತ್ಯೆಗಳಂತಹ ಘಟನೆಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಕೂಡಾ ‘ಗಡಿಬಿಡಿ ಆಕಂಡ’ ಅನ್ನುವ ಅವರಿಗೆ ಈ ಜಿಲ್ಲೆಯಲ್ಲಿ ಸಾಮರಸ್ಯ ತರಲು ಸಾಧ್ಯವಾಗಿದೆಯೇ ಎಂದು ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪದಾಧಿಕಾರಿಗಳಾದ ಮೋನು ಬಪ್ಪಳಿಗೆ ಮತ್ತು ರಶೀದ್ ಪರ್ಲಡ್ಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!