ಕನ್ನಡಪ್ರಭ ವಾರ್ತೆ ಯಾದಗಿರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರ ಜಮೀನುಗಳಲ್ಲಿ ದಾರಿ ಸಮಸ್ಯೆ, ಗ್ರಾಮ ನಕಾಶೆಗಳಲ್ಲಿ ಇಲ್ಲದಿದ್ದರೂ ಹೊಲಗಳಿಗೆ ಹೋಗಲು ಪಾರಂಪರಿಕ ಕಾಲುದಾರಿ ಹಾಗೂ ಬಂಡಿ ದಾರಿಗಳಲ್ಲಿ ಸಾಗಲು ಅಡ್ಡಿಪಡಿಸುವ ಪ್ರಕರಣಗಳನ್ನು ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಹರಿಸಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಜಮೀನು ಸರ್ವೇ ಕಾರ್ಯಗಳ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ, ಇಲಾಖೆಯ ಹಾಗೂ ನೋಂದಾಯಿತ ಸರ್ವೇಯರಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡಿದ ನಂತರ, ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಸರ್ವೇಯರ್ಗಳ ಪ್ರಗತಿಯನ್ನು ನಿರಂತರವಾಗಿ ಗಮನಿಸಲು ತಿಳಿಸಿದ ಅವರು ಎಲ್ಲಾ ತಹಸೀಲ್ದಾರರು ಸರಕಾರಿ ಜಮೀನಿಗೆ ಸಂಬಂಧಿಸಿದಂತೆ ಲ್ಯಾಂಡ್ ಬೀಟ್ ಆ್ಯಪ್ ನಲ್ಲಿ ಕಾಲೋಚಿತಗೊಳಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದರ್ಭದಲ್ಲಿ ಪ್ರವಾಹ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿಹಾನಿ ಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮಕೈಗೊಳ್ಳಬೇಕು ಎಂದರು.
ವ್ಯಾಪಕ ಮಳೆ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ ಮಳೆಯಾದರೂ ಸಹ, ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕೇಳಿಬರುತ್ತದೆ. ಆದ್ದರಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.