ವಿಹಿಂಪ, ಬಜರಂಗದಳ ಆರೋಪ । ಮದ್ದೂರು ಪ್ರಕರಣ ವಿರುದ್ಧ ಪ್ರತಿಭಟನೆ । ಗಲಭೆಕೋರರ ಬಗ್ಗೆ ಸರ್ಕಾರದ ಮೃದು ಧೋರಣೆ ಸಲ್ಲ: ಆಗ್ರಹ
ಮದ್ದೂರು ಘಟನೆಗೆ ಖಂಡನೆ, ರಂಜಾನ್ ನಿಯಮಗಳಿಲ್ಲ, ಪೊಲೀಸರ ಅಮಾನತು ಮಾಡಿ, ಸೀಕಲ್ ಆನಂದ ಗೌಡ, ಚಿಕ್ಕಬಳ್ಳಾಪುರ ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮದ್ದೂರಿನಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟ ಖಂಡಿಸಿ ವಿಶ್ವ ಹಿಂದು ಪರಿಷದ್ ಮತ್ತು ಬಜರಂಗದಳದಿಂದ ಗುರುವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.
ಈ ವೇಳೆ ಮುಖಂಡ ಸೀಕಲ್ ಆನಂದ ಗೌಡ ಮಾತನಾಡಿ, ಶ್ರೀ ಗೌರಿ ಗಣೇಶ ಹಬ್ಬ ಹಿಂದುಗಳ ಭಾವನಾತ್ಮಕ ಹಬ್ಬ. ಇದಕ್ಕೆ ಆಧ್ಯಾತ್ಮಿಕ ಹಿನ್ನೆಲೆಯೂ ಇದೆ. ಹಾಗೆ ನಮ್ಮ ದೇಶದ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ದೇಶಭಕ್ತರನ್ನು ಸಂಘಟಿಸಲು ಬಾಲಗಂಗಾಧರ್ ತಿಲಕ್ ಅವರು ಗಣೇಶ ಹಬ್ಬವನ್ನು ಸಾರ್ವಜನಿಕ ಗಣೇಶ ಹಬ್ಬವನ್ನಾಗಿ ಪರಿವರ್ತಿಸಿದರು ಎಂದರು.ನಿಯಮಗಳ ಹೆಸರಿನಲ್ಲಿ ವಿಘ್ನ
ಆದರೆ ಈ ಬಾರಿ ಗಣೇಶ ಉತ್ಸವ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ವಿಘ್ನ ವಿನಾಶಕನ ಉತ್ಸವಕ್ಕೆ ರಾಜ್ಯ ಸರ್ಕಾರವು ನಿಯಮಗಳ ಹೆಸರಿನಲ್ಲಿ ಅನೇಕ ರೀತಿಯ ವಿಘ್ನಗಳನ್ನು, ಗಣೇಶನ ಭಕ್ತರ ಮೇಲೆ ಹೇರಿದೆ. ಮಂಡ್ಯ ಜಿಲ್ಲೆಯ ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ‘ರಂಜಾನ್ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿರಬೇಕು. ಕಾಂಗ್ರೆಸ್ ಸರ್ಕಾರ ಇದ್ದಾಗ ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವವಾಗುತ್ತವೆ ಎಂದರು.ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿ ಒಳಗಿನಿಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಹೊರಗಡೆಯಿಂದ ಬಂದವರು ಹಾಗೂ ಸ್ಥಳೀಯ ಮುಸಲ್ಮಾನರಿಂದ ಕೃತ್ಯ ನಡೆದಿದೆ. ಸಾರ್ವಜನಿಕರು ಶಾಂತಿಯುತ ಹೋರಾಟ ಮಾಡುವಾಗ ಪೊಲೀಸರು ಏಕಾಏಕಿ ಲಾಠಿ ಚಾರ್ಜ್ ಮಾಡಿರುವುದು ಸರಿಯಲ್ಲ. ಮಹಿಳೆಯರ ಮೇಲೆ ಹಲ್ಲೆ ಮಾಡಿದ ಪೋಲಿಸರನ್ನು ಅಮಾನತು ಮಾಡಬೇಕು. ಕಲ್ಲು ತೂರಾಟದ ಗಲಭೆಯ ಹಿಂದೆ ಹಲವು ಸಂಘಟನೆಗಳಿವೆ. ಕೂಡಲೇ ಸೂಕ್ತ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.
ಗಲಭೆಕೋರರ ಬಗ್ಗೆ ಮೃದು ಧೋರಣೆಗಾಯಗೊಂಡಿರುವ ಭಕ್ತರಿಗೆ ಉಚಿತ ಚಿಕಿತ್ಸೆ ಹಾಗೂ ಆಸ್ತಿಹಾನಿಯ ವೆಚ್ಚವನ್ನು ಗಲಭೆಕೋರರಿಂದ ವಸೂಲಿ ಮಾಡಬೇಕು. ಒಂದು ವೇಳೆ ಗಲಭೆಕೋರರ ಬಗ್ಗೆ ಮೃದುಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗಣೇಶ ಉತ್ಸವದಲ್ಲಿ ಭಾಗವಹಿಸಲು ವಿಶ್ವ ಹಿಂದೂ ಪರಿಷತ್ತಿನ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಲವು ಕಡೆ ಧ್ವನಿ ವರ್ಧಕಗಳನ್ನು ಬಳಸಲು ನಿಷೇಧ ಹೇರಿದೆ. ನಮ್ಮ ರಾಜ್ಯದಲ್ಲಿ ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ಶೋಭ ಯಾತ್ರೆ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಅಲ್ಪಸಂಖ್ಯಾತರೆಂಬ ಹಣೆಪಟ್ಟಿ ಹೊತ್ತಿರುವ ಕಿಡಿಗೇಡಿಗಳಿಂದ ಮೆರವಣಿಗೆ ಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಇವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳದೆ ಹಿಂದುಗಳ ಮೇಲೆಯೇ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದರು.ಕಲ್ಲು ತೂರಿದವನ್ನು ಶಿಕ್ಷಿಸಿ
ನಮ್ಮ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್ತಿನ ಅನೇಕ ಮುಖಂಡರ ಮೇಲೆ ವಿಧಿಸಿರುವ ಜಿಲ್ಲಾ ಪ್ರವೇಶ ನಿರ್ಬಂಧ ಆದೇಶವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಹಾಗೂ ಗಣೇಶ ಉತ್ಸವ ಹಾಗೂ ಶೋಭಾ ಯಾತ್ರೆ ಮೆರವಣಿಗೆಗಳು ಸಂಭ್ರಮದಿಂದ ನಡೆಯಲು ಅನುಕೂಲ ಮಾಡಿಕೊಡ ಬೇಕು. ಗಣೇಶೋತ್ಸವ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡುವವರ ಮೇಲೆ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳ ಬೇಕು ಮತ್ತು ಕಲ್ಲು ತೂರುವ ಸ್ಥಳಗಳ ಮೇಲೆ ಡ್ರೋನ್ ಕ್ಯಾಮೆರಾ ಅಳವಡಿಸಬೇಕು ಎಂದು, ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ,ಭಜರಂಗದಳ ಸಂಯೋಜಕ ಜಿ.ಎ.ಅಮರೇಶ್, ಮುಖಂಡರಾದ ಚಿಕ್ಕನಹಳ್ಳಿ ನಾರಾಯಣಸ್ವಾಮಿ, ಲಕ್ಷ್ಮಿನಾರಾಯಣಗುಪ್ತ, ಸಾಗಾನಹಳ್ಳಿಶಿವಕುಮಾರ್, ಮಧುಚಂದ್ರ, ಆರ್ ಹೆಚ್ಎನ್ ಅಶೋಕ್ ಕುಮಾರ್, ಚಲುವರಾಜು,ಪುರುಷೋತ್ತಮ್, ನರೇಶ್, ಮಲ್ಲಿಕಮ್ಮ ಮ್ಮತ್ತಿತರರು ಇದ್ದರು.
ಸಿಕೆಬಿ-1....ಚಿಕ್ಕಬಳ್ಳಾಪುರ ನಗರದಲ್ಲಿ ವಿಶ್ವ ಹಿಂದು ಪರಿಷದ್ ಮತ್ತು ಬಜರಂಗದಳದಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು