ಸಿದ್ದರಾಮಯ್ಯ ಜೊತೆ ಅಸಮಾಧಾನ, ರಾಜ್ಯದಸಮಸ್ಯೆ ಅಲ್ಲ, ನಮ್ಮ ಸಮಸ್ಯೆ- ಜಾರಕಿಹೊಳಿ

KannadaprabhaNewsNetwork |  
Published : Jul 15, 2026, 02:15 AM IST
ಸತೀಶ ಜಾರಕಿಹೊಳಿ | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಹಾವೇರಿ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ಅಸಮಾಧಾನದ ವಿಚಾರ ರಾಜ್ಯ ಮಟ್ಟದ ಸಮಸ್ಯೆಯಲ್ಲ ಅದು ನಮ್ಮ ನಡುವಿನ ಸಮಸ್ಯೆ ಎಂದು ಹೇಳುವ ಮೂಲಕ ರಾಜ್ಯ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನದ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಜೊತೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದೇ ಅದು ರಾಜ್ಯದ ಸಮಸ್ಯೆ ಅಲ್ಲ, ನಮ್ಮ ನಮ್ಮ ನಡುವಿನ ಸಮಸ್ಯೆ ಎಂದಷ್ಟೇ ಚುಟುಕಾಗಿ ಉತ್ತರಿಸಿದರು. ಭಿನ್ನಾಭಿಪ್ರಾಯ, ಅಸಮಾಧಾನ ಇಲ್ಲ ಎಂದೇನೂ ಹೇಳಲಿಲ್ಲ.

ಒತ್ತಾಯದಿಂದ ಬಿಡದಿ ಜಮೀನು ಪಡೆಯುತ್ತಿಲ್ಲ: ಬಿಡದಿ ಭಾಗದ ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ ಎಂದು ಸಚಿವ ಜಾರಕಿಹೊಳಿ ಹೇಳಿದರು.

ರೈತರ ಜಮೀನನ್ನು ಸರ್ಕಾರ ಒತ್ತಾಯಪೂರ್ವಕವಾಗಿ ಪಡೆಯುತ್ತಿಲ್ಲ. ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದೆ ಬರುತ್ತಿರುವ ರೈತರ ಜಮೀನನ್ನು ಮಾತ್ರ ಪಡೆಯಲಾಗುತ್ತಿದೆ. ಜಮೀನು ನೀಡುವುದಿಲ್ಲ ಎಂದು ಹೇಳಿದವರ ಜಮೀನನ್ನು ಸರ್ಕಾರ ಪಡೆದುಕೊಳ್ಳುವುದಿಲ್ಲ. ಜಮೀನು ನೀಡಿದವರ ಜಾಗದ ಸರ್ವೆ ಕಾರ್ಯಕ್ಕಾಗಿ ಅಧಿಕಾರಿಗಳು ನಿನ್ನೆ ಕೂಡ ಭೇಟಿ ನೀಡಿದ್ದರು ಎಂದು ಹೇಳಿದರು.

ರೈತರ ಮೇಲೆ ಯಾವ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಸರ್ಕಾರದಿಂದ ರೈತರ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ. ಅಲ್ಲಿ ನಡೆದಿರುವ ಘಟನೆಯ ಸಂಪೂರ್ಣ ಮಾಹಿತಿ ನನಗೆ ಇಲ್ಲ. ಆದರೆ ರೈತರ ಮೇಲೆ ಯಾವುದೇ ಒತ್ತಡ ಅಥವಾ ಬಲವಂತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಆರ್‌ಎಸ್‌ಎಸ್ ನೋಂದಣಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ನೋಂದಣಿ ಕುರಿತ ವಿಚಾರವು ಗೃಹ ಸಚಿವರ ವ್ಯಾಪ್ತಿಗೆ ಸಂಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅಹಿಂದ ಸಂಘಟನೆ ಈ ಹಿಂದೆ ಯಾವುದೋ ಹೆಸರಿನಲ್ಲಿ ನೋಂದಣಿಯಾಗಿದೆ. ಆದರೆ ಈ ವಿಚಾರವು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದದ್ದಲ್ಲ ಎಂದು ಸ್ಪಷ್ಟಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನ ಕೆರೆ ಹೊಳೆತ್ತುವ ಕಾಮಗಾರಿ ಭೂಮಿ ಪೂಜೆ
ನಾಳೆ ರೈತ ಜಾಗೃತ ಸಮಾವೇಶ: ಡಾ. ವಾಸುದೇವ ಮೇಟಿ