ಕನ್ನಡಪ್ರಭ ವಾರ್ತೆ ಇಂಡಿ
ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿ ವ್ಯವ್ಯಸ್ಥಿತವಾಗಿ ಪಡಿತರ ಆಹಾರ ಹಂಚಿಕೆ ಮಾಡಬೇಕು. ಯಾವುದೇ ಅಹಿತಕರ ಘಟನೆ ಆಗದಂತೆ ಕ್ರಮಕೈಗೊಳ್ಳಬೇಕು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಹೇಳಿದರು.ತಾಲೂಕು ಪಂಚಾಯತಿ ಸಭಾಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪಡಿತರ ಅಂಗಡಿಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಮಾಹಿತಿಯ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಪಡಿತರ ಅಂಗಡಿಕಾರರ ಸಭೆ ಕರೆಯಲು ಅಧಿಕಾರಿಗಳಿಗೆ ಸೂಚಿಸಿದರುತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಭೀಮಾಶಂಕರ ಕನ್ನೂರ ಮಾತನಾಡಿ, ಗ್ಯಾರಂಟಿಗಳ ಲಾಭ ಪಡೆಯದೇ ಇರುವ ಅಮಾಯಕ ಜನರ ಮನೆ, ಮನೆಗೂ ಯೋಜನೆಯ ಲಾಭ ತಲುಪಿಸಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು. ಬಸ್ ನಿಲ್ದಾಣ ಸ್ಥಳಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸಿಸಿ ಕ್ಯಾಮರಾ ಸ್ಟೋರೇಜ್ ಅನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಸಮಿತಿಯ ಸದಸ್ಯರಾದ ಮಹೇಶ ಹೊನ್ನಬಿoದಗಿ, ಸಂಜಕುಮಾರ್ ನಾಯ್ಕೊಡಿ, ಸತೀಶ ಹತ್ತಿ, ನಿರ್ಮಲ ತಳಕೇರಿ, ಶೈಲಜಾ ಜಾಧವ, ಶಶಿಕುಮಾರ ಮಠ, ಸಿದ್ದು ಕಟ್ಟಿಮನಿ, ಪ್ರಭು ಕುಂಬಾರ, ಸಂಕೇತ ಜೋಶಿ, ಮಲೇಶಿ ಬೋಸಗಿ, ರುದ್ರಗೌಡ ಆಲಗೊಂಡ, ಭೀಮರಾಯ ಮೇತ್ರಿ, ಸೋಮಣ್ಣ ಪ್ರಚಂಡಿ, ಅಜಿತ ಜೀರಗಿ ಹಾಗೂ ತಾಪಂ ಯೋಜನಾಧಿಕಾರಿ ನಂದೀಪ ರಾಠೋಡ, ಸಹಾಯಕ ನಿರ್ದೇಶಕ ಪ್ರಕಾಶ ರಾಠೋಡ ಸೇರಿ ಇಲಾಖೆಗಳ ಅಧಿಕಾರಿಗಳು, ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.