ಎಲ್ಲ ನಿರಾಶ್ರಿತರಿಗೆ ಪರಿಹಾರ ವಿತರಿಸಿ, ಮನೆಗಳ ನಿರ್ಮಿಸಿಕೊಡಿ: ಬಸವಂತಪ್ಪ

KannadaprabhaNewsNetwork |  
Published : Oct 28, 2024, 01:23 AM IST
ಕ್ಯಾಪ್ಷನಃ27ಕೆಡಿವಿಜಿ31, 32ಃದಾವಣಗೆರೆ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಈಚೆಗೆ ಸುರಿದ ಮಳೆಗೆ ಕುಸಿದು ಬಿದ್ದ ಮನೆಯನ್ನು ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- ದಿಂಡದಹಳ್ಳಿ, ಕೊಗ್ಗನೂರಿಗೆ ಮಾಯಕೊಂಡ ಶಾಸಕ ಭೇಟಿ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಲೂಕಿನ ದಿಂಡದಹಳ್ಳಿ ಮತ್ತು ಕೊಗ್ಗನೂರು ಗ್ರಾಮದಲ್ಲಿ ಕುಸಿದು ಬಿದ್ದಿರುವ ಮನೆಗಳನ್ನು ವೀಕ್ಷಿಸಿದರು. ಸಾಕಷ್ಟು ಗ್ರಾಮಗಳಲ್ಲಿ ಮನೆಗಳು ಭಾಗಶಃ ಹಾನಿಯಾಗಿವೆ. ಮೆಕ್ಕೆಜೋಳ ಸೇರಿದಂತೆ ಇನ್ನಿತರೆ ಬೆಳೆಗಳು ಕೂಡ ನಿರಂತರ ಮಳೆಗೆ ಕೊಳೆತುಹೋಗಿವೆ. ಕೃಷಿ ಮತ್ತು ಕಂದಾಯ ಅಧಿಕಾರಿಗಳ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಕಳೆದುಕೊಂಡ ರೈತರಿಗೆ ಮತ್ತು ಮನೆ ಕಳೆದುಕೊಂಡ ನಿರಾಶ್ರಿತರಿಗೆ ಪರಿಹಾರ ನೀಡುವ ಜೊತೆಗೆ ಮನೆಗಳನ್ನು ನಿರ್ಮಿಸಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಜೆಜೆಎಂ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಳಪೆ ಗುಣಮಟ್ಟದಿಂದ ಕೂಡಿದೆ, ನೀರು ಪೂರೈಕೆ ಆಗುತ್ತಿಲ್ಲ ಎಂದು ಗ್ರಾಮಸ್ಥರು ಶಾಸಕರ ಬಳಿ ಸಮಸ್ಯೆ ಬಿಚ್ಚಿಟ್ಟರು. ಕಾಮಗಾರಿ ಪರಿಶೀಲಿಸಿದ ಶಾಸಕರು, ಕಳಪೆ ಕಂಡು ಗುತ್ತಿಗೆದಾರರ ವಿರುದ್ಧ ಕೆಂಡಾಮಂಡಲರಾದರು. ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ, ಗ್ರಾಮಸ್ಥರಿಗೆ ಸಮಪರ್ಕ ಕುಡಿಯುವ ನೀರು ಪೂರೈಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪರಶುರಾಮ್, ಗಣೇಶಪ್ಪ, ಹೊನ್ನೂರಪ್ಪ, ಬಸಣ್ಣ, ಶ್ರೀಕಾಂತ್, ಕೆಂಚಪ್ಪ ಹಾಗೂ ಗ್ರಾಮಸ್ಥರು ಇದ್ದರು.

ವಾಲ್ಮೀಕಿ ಜಯಂತಿ:

ದಿಂಡದಹಳ್ಳಿ ಗ್ರಾಮದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭಾಗವಹಿಸಿದರು. ಮಹರ್ಷ ವಾಲ್ಮೀಕಿ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಆ ಮೂಲಕ ಉತ್ತಮ ಸತ್ರ್ಪಜೆಗಳನ್ನಾಗಿ ರೂಪಿಸಬೇಕು ಎಂದು ಸಲಹೆ ನೀಡಿದರು. ಕಾಂಗ್ರೆಸ್ ಮುಖಂಡ ಮಂಜುನಾಥ್, ನಾಗರಾಜ್, ಗಣೇಶ್, ಪರಶುರಾಮ್, ಬಸಣ್ಣ ಹಾಗೂ ಸಮಾಜ ಬಾಂಧವರು ಭಾಗವಹಿಸಿದ್ದರು.

- - - ಬಾಕ್ಸ್ * ನಿರಾಶ್ರಿತರು ಆತಂಕ ಪಡಬಾರದು: ಶಾಸಕ ನಿರಂತರ ಮಳೆ ಸುರಿದು ಕುಸಿದು ಬಿದ್ದಿರುವ ಮನೆಗಳಿಗೆ ಪರಿಹಾರ ಕೊಟ್ಟರೆ, ಮನೆ ಮಂಜೂರು ಆಗುವುದಿಲ್ಲ. ಮನೆ ಬೇಕೋ ಅಥವಾ ಪರಿಹಾರ ಬೇಕೋ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ನಿರಾಶ್ರಿತರು ಶಾಸಕರ ಬಳಿ ಪರಿಹಾರ ಮತ್ತು ಮನೆ ಮಂಜೂರು ಮಾಡಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಪ್ರತಿಕ್ರಿಯಿಸಿ, ಮಳೆಯಿಂದ ಮನೆಗಳು ಹಾನಿಗೊಳಗಾದ ನಿರಾಶ್ರಿತರಿಗೆ ಸರ್ಕಾರ ಪರಿಹಾರವನ್ನೂ ಕೊಡುತ್ತದೆ, ಮನೆಯೂ ಮಂಜೂರು ಮಾಡುತ್ತದೆ. ಯಾವುದೇ ಕಾರಣಕ್ಕೂ ಆತಂಕ ಪಡಬೇಡಿ ಎಂದು ಧೈರ್ಯ ತುಂಬಿದರು.

- - - -27ಕೆಡಿವಿಜಿ31, 32ಃ:

ದಾವಣಗೆರೆ ತಾಲೂಕಿನ ದಿಂಡದಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಮಳೆಗೆ ಕುಸಿದು ಬಿದ್ದ ಮನೆಯನ್ನು ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ ನಡೆಸಿದರು.

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ