ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಿಗೆ ಭಗವದ್ಗೀತೆ ವಿತರಣೆ

KannadaprabhaNewsNetwork |  
Published : Nov 09, 2024, 01:24 AM IST
ನಗರದಲ್ಲಿ ಭಗವದ್ಗೀತಾ ಅಭಿಯಾನ: ಭಗವದ್ಗೀತೆಯ ಪ್ರತಿಗಳ ವಿತರಿಣೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಒಂದು ಸಾವಿರಕ್ಕೂ ಹೆಚ್ಚು ಭಗವದ್ಗೀತೆಯ ಪ್ರತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ:

ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನದ ಸಹಯೋಗದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಒಂದು ಸಾವಿರಕ್ಕೂ ಹೆಚ್ಚು ಭಗವದ್ಗೀತೆಯ ಪ್ರತಿಗಳನ್ನು ಉಚಿತವಾಗಿ ವಿತರಿಸಲಾಯಿತು.

ಅಭಿಯಾನದ ಕಾರ್ಯಾಧ್ಯಕ್ಷ ಉಮೇಶ ಕಾರಜೋಳ ಮಾತನಾಡಿ, ಭಗವದ್ಗೀತೆ ಮನುಷ್ಯನಿಗೆ ನೈತಿಕತೆ ಬೋಧಿಸುವ ದಿವ್ಯ ಗ್ರಂಥವಾಗಿದ್ದು, ಗೀತಾ ಸಾರವನ್ನು ತಿಳಿದುಕೊಂಡು ಬದುಕಿದರೆ ಇಡೀ ಬದುಕೇ ಧನ್ಯವಾಗುತ್ತದೆ. ಯುದ್ಧಭೂಮಿಯಲ್ಲಿ ಅರ್ಜುನ ಶಸ್ತ್ರಾಸ್ತ್ರ ಕೆಳಗಿಟ್ಟ ಸಂದರ್ಭದಲ್ಲಿ ಅಸತ್ಯದ ವಿರುದ್ಧ ಸತ್ಯದ ಜಯಕ್ಕಾಗಿ ಈ ಹೋರಾಟ ಅನಿವಾರ್ಯ ಎಂದು ವಿವರಿಸುವ ಸಂದರ್ಭದಲ್ಲಿ ಭಗವಾನ ಶ್ರೀ ಕೃಷ್ಣ ಭಗವದ್ಗೀತೆಯನ್ನು ಬೋಧಿಸುತ್ತಾರೆ. ಇಡೀ ಬದುಕಿನ ನಿಜಾರ್ಥವೇ ಭಗವದ್ಗೀತೆಯಲ್ಲಿ ಅಡಗಿದ್ದು, ಮಕ್ಕಳು ಬಾಲ್ಯದಲ್ಲಿಯೇ ಭಗವದ್ಗೀತೆಯ ತತ್ವಗಳನ್ನು ಅಳವಡಿಸಿಕೊಳ್ಳಲು ನೆರವಾಗಲು ಈ ಅಭಿಯಾನ ಸಂಘಟಿಸಲಾಗುತ್ತಿದೆ. ಮಕ್ಕಳು ಭಗವದ್ಗೀತೆಯನ್ನು ಓದುವ ಪರಿಪಾಠ ಅದರಲ್ಲಿರುವ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸುಂದರ ಜೀವನ ಹಾಗೂ ಭವಿಷ್ಯ ರೂಪಿಸಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದರು.ಈ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಸಿದ್ಧಣ್ಣ ಸಕ್ರಿ, ಸಹಜಾನಂದ ದಂದರಗಿ, ಜಿಲ್ಲಾ ಯುವ ಪರಿಷತ್ ಜಿಲ್ಲಾಧ್ಯಕ್ಷ ಶರಣು ಸಬರದ, ರಾಜೇಶ್ವರಿ ಮೋಪಗಾರ, ಪರಶುರಾಮ ಕುಂಬಾರ, ಎಸ್.ಎಸ್.ಬೊಮ್ಮನಹಳ್ಳಿ, ವಿದ್ಯಾವತಿ ಅಂಕಲಗಿ, ರಾಜಶೇಖರ ಖೇಡಗಿ, ವಿನೋದ ಮಣೂರ, ವಿರೇಶ ಗೊಬ್ಬೂರ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್
ಪೊಲೀಸರಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪ : ಪತ್ರಕರ್ತ ವಶ