ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಅವರು, ಸಮಾಜವನ್ನು ರಕ್ಷಿಸುವ ಹಾಗೂ ಸಾರ್ವಜನಿಕರನ್ನು ಜಾಗೃತಿಯನ್ನಾಗಿಸುವ ಅನೇಕ ಕೆಲಸಗಳನ್ನು ಪತ್ರಿಕೆಗಳು ಮಾಡುತ್ತಿವೆ. ಕಾರ್ಯಾಂಗ, ಶಾಸಕಾಂಗ, ನ್ಯಾಯಂಗದ ಜೊತೆಯಲ್ಲೇ ಪತ್ರಿಕಾರಂಗವು ಬಹುಮುಖ್ಯ. ಮಕ್ಕಳಿಗೆ ಪ್ರತಿದಿನ ಪತ್ರಿಕೆಗಳನ್ನು ಓದುವ ಮೂಲಕ ನಾಡಿನ, ಜಿಲ್ಲೆಯ, ರಾಷ್ಟ್ರದ ಸುದ್ದಿ ಸಮಾಚಾರಗಳನ್ನು, ಕ್ರೀಡೆ, ಸಂಗೀತ, ಇನ್ನು ಮುಂತಾದ ವಿಷಯಗಳನ್ನು ತಿಳಿದುಕೊಳ್ಳಬೇಕು ಹಾಗೂ ಉತ್ತಮವಾಗಿ ಓದಿ ಸಮಾಜಕ್ಕೆ ಒಳ್ಳೆಯ ಗಣ್ಯ ವ್ಯಕ್ತಿಗಳಾಗಬೇಕು ಎಂದರು.
ಈ ವೇಳೆ ಪತ್ರಿಕಾ ಸಂಪಾದಕರು, ವರದಿಗಾರರು, ಪತ್ರಿಕಾ ವಿತರಕರು ಪತ್ರಿಕೋದ್ಯಮದ ಎಲ್ಲರಿಗೂ ಪತ್ರಿಕಾ ದಿನಾಚರಣೆಯ ಶುಭಾಶಯ ತಿಳಿಸಿದರು.ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜೆ.ಎಸ್. ಹೋಮದೇವ ಮಾತನಾಡಿ, ಪತ್ರಿಕೆಗಳು ಜಾರಿಗೆ ಬಂದ ದಿನ, ಪತ್ರಿಕೆಗಳು ಹುಟ್ಟಿದ ದಿನ ತಿಳಿದುಕೊಳ್ಳಬೇಕು. ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.
ಸುಬ್ರಮಣಿ, ಛಾಯಾ, ಯಶವಂತ್ ಕುಮಾರ್, ಮಹದೇವ್, ಮಹೇಶ್, ಚಂದ್ರಶೇಖರ್, ಎಸ್.ಪಿ. ಅಕ್ಷಯ ಪ್ರಿಯಾದರ್ಶನ್, ಸ್ವಾಮಿ, ಶ್ರೀಧರ್ ಮೊದಲಾದವರು ಇದ್ದರು.