ಮತದಾರರಿಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣೆ

KannadaprabhaNewsNetwork |  
Published : Apr 30, 2024, 02:10 AM IST
ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿದರು. | Kannada Prabha

ಸಾರಾಂಶ

ಇಡಗುಂದಿ ಗ್ರಾಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಏ. ೨೭ರಂದು ಚುನಾವಣೆಯ ಪ್ರಯುಕ್ತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಯಿತು.

ಯಲ್ಲಾಪುರ: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್‌ ಅವರ ಗೆಲುವಿಗಾಗಿ ಶತಾಯಗತಾಯ ಶ್ರಮ ಪಡುತ್ತಿದ್ದಾರೆ. ತಾಲೂಕಿನ ಇಡಗುಂದಿ ಗ್ರಾಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಏ. ೨೭ರಂದು ಚುನಾವಣೆಯ ಪ್ರಯುಕ್ತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ, ಮತಯಾಚಿಸಿದರು.

ಪಂಚ ಗ್ಯಾರಂಟಿ ಸಮಿತಿಯ ತಾಲೂಕು ಕಾರ್ಯದರ್ಶಿ ಮಹೇಶ ನಾಯ್ಕ, ಬಿಸಿಸಿ ತಾಲೂಕು ಉಪಾಧ್ಯಕ್ಷ ರಾಘವೇಂದ್ರ ನಾಯ್ಕ, ಗುಳ್ಳಾಪುರ ಬೂತ್ ಅಧ್ಯಕ್ಷ ಇಸ್ಮಾಯಿಲ್, ಪ್ರಮುಖ ಕಾರ್ಯಕರ್ತರಾದ ಸುಬ್ರಾಯ ಸಿದ್ದಿ, ಸಣ್ಯಾ ಸಿದ್ದಿ, ಪ್ರದೀಪ್ ಬಾಂದೇಕರ್, ರೂಪಗಟ್ಟಿ ಜಾನಕಿ ಸಿದ್ದಿ, ಸುಶೀಲಾ ಸಿದ್ದಿ ಮುಂತಾದವರು ಉಪಸ್ಥಿತರಿದ್ದರು.ಭಾನುವಾರ ತಾಲೂಕಿನ ತಳ್ಳೀಕೇರಿ, ಕಿರವತ್ತಿಯ ಜಯಂತಿನಗರದ ಬೂತ್, ಪಟ್ಟಣದ ಇಸ್ಲಾಂ ಗಲ್ಲಿ, ಅಂಬೇಡ್ಕರ್ ನಗರ, ಇಡಗುಂದಿ ಗ್ರಾಪಂ ವ್ಯಾಪ್ತಿಯ ಕೆಳಾಸೆಗಳಲ್ಲಿಯೂ ಪ್ರಚಾರ ಕೈಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಪಕ್ಷದ ಗ್ಯಾರಂಟಿ ಯೋಜನೆಯ ಕಾರ್ಡ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ನೇತ್ರೇಕರ, ಸೇವಾದಳದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಆಯೆಷಾ ಗೊಜನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಷಯ ರೇವಣಕರ, ರೂಪಾ ಪಾಟಣಕರ, ಅಸಂಘಟಿತ ಕಾರ್ಮಿಕ ವಿಭಾಗದ ತಾಲೂಕಾಧ್ಯಕ್ಷ ರೇವಣಸಿದ್ದ ಉಣಕಲ್, ಮತ್ತಿತರ ಹಿರಿಕಿರಿಯ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಕಾಂಗ್ರೆಸ್‌ ಪಂಚ ಗ್ಯಾರಂಟಿ ಯೋಜನೆ ಸಭೆ

ಯಲ್ಲಾಪುರ: ಪಟ್ಟಣದ ಚರ್ಚ್ ರಸ್ತೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಯ ಸಭೆಯನ್ನು ಏ. ೨೭ರಂದು ಹಮ್ಮಿಕೊಳ್ಳಲಾಗಿತ್ತು. ಗ್ಯಾರಂಟಿ ಸಮಿತಿಯ ತಾಲೂಕಾಧ್ಯಕ್ಷ ಉಲ್ಲಾಸ ಶಾನಭಾಗ, ಸಮಿತಿ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಗಾಂವ್ಕರ, ಸದಸ್ಯರಾದ ನುಶ್ರತ್ ಶೇಕ್, ಬಿಸಿಸಿ ಕಾರ್ಯದರ್ಶಿ ಅನಿಲ ಮರಾಠೆ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಸರಸ್ವತಿ ಗುನಗಾ, ಮಹಿಳಾ ಮೋರ್ಚಾ ತಾಲೂಕಾಧ್ಯಕ್ಷೆ ಪೂಜಾ ನೇತ್ರೇಕರ, ಬೂತ್ ಅಧ್ಯಕ್ಷ ಜಾನಿ ಅಲ್ಫಾಂಸೋ, ಪಪಂ ಮಾಜಿ ಅಧ್ಯಕ್ಷ ಎಂ.ಜಿ. ಮುಲ್ಲಾ, ಸಿದ್ದು ಉಣಕಲ್, ಅಕ್ಷಯ ರೇವಣಕರ, ಬಾಬಾ ಶೇಕ್, ಶಕೀರ್ ಶೇಕ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ